ಬ್ರೇಕಿಂಗ್ ನ್ಯೂಸ್
12-09-24 08:24 pm Mangalore Correspondent ಕರಾವಳಿ
ಮಂಗಳೂರು, ಸೆ.12: ಮುಂದಿನ ವಾರ ಈದ್ ಮಿಲಾದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು. ಈದ್ ಮಿಲಾದ್ ಮೆರವಣಿಗೆಯನ್ನು ರಸ್ತೆಯಲ್ಲಿ ಮಾಡುವಾಗ, ಒಂದ್ವೇಳೆ ಹಿಂದುಗಳು ಅವಕಾಶ ನೀಡದಿದ್ದರೆ ಜಿಹಾದಿಗಳ ಮೆರವಣಿಗೆ ನಡೆಯುವುದಕ್ಕೆ ಸಾಧ್ಯವಿಲ್ಲ. ಕಳೆದ ಬಾರಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮೆರವಣಿಗೆ ವೇಳೆ ಗಲಭೆ ನಡೆಸಿದ್ದರು. ಈ ಬಾರಿಯೂ ರಾಜ್ಯದಲ್ಲಿ ಗಲಭೆ ಮರುಕಳಿಸುವ ಸಾಧ್ಯತೆಯಿದೆ. ಹೀಗಾಗಿ ಈ ಬಾರಿ ಈದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಿ ಗಲಭೆ ನಡೆಸಿರುವುದನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಬಾರಿ ಈದ್ ಮೆರವಣಿಗೆಯ ಮೇಲೆ ನಿರ್ಬಂಧ ಹೇರಬೇಕು, ಒಂದ್ವೇಳೆ ಮೆರವಣಿಗೆಗೆ ಅವಕಾಶ ಕೊಟ್ಟು ಹಿಂದುಗಳ ಮೇಲೆ ಹಲ್ಲೆ ಘಟನೆಗಳಾದಲ್ಲಿ ಅದಕ್ಕೆ ರಾಜ್ಯ ಸರಕಾರವೇ ಕಾರಣವಾಗುತ್ತದೆ ಎಂದು ಹೇಳಿದರು.




ನಾಗಮಂಗಲ ಗಲಭೆಯ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆಯ ಕೈವಾಡ ಇದೆಯೇ ಎನ್ನುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅಲ್ಲಿ ನೂರಾರು ಹಿಂದುಗಳ ಮೇಲೆ ಹಲ್ಲೆಯಾಗಿದೆ, ಹತ್ತಾರು ಅಂಗಡಿಗಳಿಗೆ ಬೆಂಕಿ ಕೊಟ್ಟಿದ್ದಾರೆ. ಸಾರ್ವಜನಿಕ ಆಸ್ತಿ ಮೇಲೆ ಹಾನಿ ಮಾಡಿದ್ದಾರೆ. ನಷ್ಟ ಆದವರಿಗೆ ಪರಿಹಾರ ನೀಡಬೇಕು. ಯಾರು ಮುಗ್ಧ ಅಮಾಯಕರ ಮೇಲೆ ಕೇಸು ಹಾಕಿದ್ದೀರಿ, ಅವರ ಮೇಲಿನ ಕೇಸನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಶರಣ್, ನಮಗೆ ರಾಜ್ಯ ಸರಕಾರ, ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ನಮ್ಮ ಧಾರ್ಮಿಕ ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡುತ್ತೇವೆ. ಪೊಲೀಸರ ಬದಲು ಕೇಂದ್ರದ ಮಿಲಿಟರಿಯ ರಕ್ಷಣೆ ನೀಡಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Don't give permission for Eid says Sharan Pumpwell, VHP in Mangalore. Says tense situations like Ragi gudda might re appear.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm