ಬ್ರೇಕಿಂಗ್ ನ್ಯೂಸ್
12-09-24 10:21 pm Mangalore Correspondent ಕರಾವಳಿ
ಮಂಗಳೂರು, ಸೆ.12: ಖಾಸಗಿ ಸಿಟಿ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರಿಂದ ವಿದ್ಯಾರ್ಥಿಗಳು ಫುಟ್ ಬೋರ್ಡಿನಲ್ಲಿ ನೇತಾಡುತ್ತ ತೆರಳುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ವಿಡಿಯೋ ಸಹಿತ ಸುದ್ದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬಸ್ಸಿನ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಕೇಸು ದಾಖಲಿಸಿದ್ದಾರೆ.
ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ 42 ನಂಬರಿನ ಖಾಸಗಿ ಸಿಟಿ ಬಸ್ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಗೆ ತಲುಪಿದಾಗ, ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದು ಈ ವೇಳೆ ಫುಡ್ ಬೋರ್ಡಿನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೊರಕ್ಕೆಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದ. ಇದರ ವಿಡಿಯೋವನ್ನು ಹಿಂದಿನಿಂದ ಬರುತ್ತಿದ್ದ ಆಟೋ ಚಾಲಕರೊಬ್ಬರು ಸೆರೆಹಿಡಿದಿದ್ದು ಅಪಘಾತ ಆದರೆ ಯಾರು ಹೊಣೆಯೆಂದು ಪ್ರಶ್ನಿಸಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ವಿಡಿಯೋ ಆಧರಿಸಿ ಹೆಡ್ ಲೈನ್ ಕರ್ನಾಟಕ ಈ ಬಗ್ಗೆ ಪೊಲೀಸರನ್ನು ಪ್ರಶ್ನಿಸಿ ಸುದ್ದಿ ಪ್ರಕಟಿಸಿದ್ದಲ್ಲದೆ, ಟ್ವಿಟರ್ ನಲ್ಲಿ ವಿಡಿಯೋವನ್ನು ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಎಡಿಜಿಪಿ ಅಲೋಕ್ ಕುಮಾರ್ ಗೆ ಟ್ಯಾಗ್ ಮಾಡಿತ್ತು. ಇದರಿಂದ ಅಲರ್ಟ್ ಆಗಿರುವ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್, ಬಸ್ಸಿನ ಸಿಬಂದಿ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ. ವಿಡಿಯೋ ಆಧರಿಸಿ ಸುಮೊಟೊ ಪ್ರಕರಣ ದಾಖಲಿಸಲು ಅವಕಾಶ ಇದ್ದರೂ, ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಆಟೋ ಚಾಲಕನಲ್ಲಿಯೇ ದೂರು ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬಸ್ಸಿನ ಚಾಲಕ ಮಹಮ್ಮದ್ ಫಯಾಜ್ ಮತ್ತು ನಿರ್ವಾಹಕ ಮನೀಶ್ ತೀರಾ ನಿರ್ಲಕ್ಷ್ಯದಿಂದ ಪ್ರಯಾಣಿಕರನ್ನು ತುಂಬಿಸಿಕೊಂಡು ಹೋಗಿದ್ದಾರೆ. ಇದರಿಂದ ಪ್ರಯಾಣಿಕರ ಜೀವಕ್ಕೆ ಅಪಾಯಕ್ಕೀಡು ಮಾಡುವಂತೆ ವರ್ತಿಸಿದ್ದಾರೆ ಎಂದು ಕೇಸು ದಾಖಲಾಗಿದೆ.
We appreciate #AnupamAgarwal, the Commissioner of #Mangalore City #Police, for taking prompt action against the overloading of a bus on footrests on Route No. 42, St. Antony Travels. #Mangalorenews @compolmlr @alokkumar6994 pic.twitter.com/4TrzrE7a6u
— Headline Karnataka (@hknewsonline) September 12, 2024
Mangalore St Antony bus driver and conductor booked by traffic police after Headline Karnataka news video goes viral on overloading.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm