ಬ್ರೇಕಿಂಗ್ ನ್ಯೂಸ್
13-09-24 07:09 pm Mangalore Correspondent ಕರಾವಳಿ
ಉಳ್ಳಾಲ, ಸೆ.13: "ಕಲ್ಜಿಗ" ಕನ್ನಡ ಚಲನಚಿತ್ರ ರಾಜ್ಯಾದ್ಯಂತ ಬಿಡುಗಡೆಗೊಂಡಿದ್ದು, ಚಿತ್ರದಲ್ಲಿ ಕೊರಗಜ್ಜನ ಕಾರಣಿಕವನ್ನ ತೋರಿಸಲಾಗಿದೆಯೆ ಹೊರತು ದೈವಕ್ಕೆ ಎಲ್ಲೂ ಅಪಚಾರವೆಸಗಿಲ್ಲ. ಚಿತ್ರವನ್ನ ಒಂದು ಬಾರಿಯಾದರೂ ನೋಡದೆ ಅಪ ಪ್ರಚಾರಕ್ಕಿಳಿಯುವುದು ಸರಿಯಲ್ಲ ಎಂದು ನಾಯಕ ನಟ ಅರ್ಜುನ್ ಕಾಪಿಕಾಡ್ ಹೇಳಿದ್ದಾರೆ.
ಕಲ್ಜಿಗ ಚಿತ್ರದ ಯಶಸ್ಸಿಗಾಗಿ ಕಲ್ಲಾಪು ಬುರ್ದುಗೋಳಿಯ ಗುಳಿಗ- ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಅರ್ಜುನ್ ಕಾಪಿಕಾಡ್ ಮಾಧ್ಯಮದೊಂದಿಗೆ ಮಾತನಾಡಿದರು. ಪ್ರಕೃತಿ ರಮಣೀಯ ಬುರ್ದುಗೋಳಿ ಕ್ಷೇತ್ರಕ್ಕೆ ಬಂದು ಧ್ಯಾನಿಸಿದರೆ ಮನಸ್ಸು ಎಷ್ಟೇ ಭಾರವಿದ್ದರೂ ಹಗುರಗೊಳ್ಳುತ್ತದೆ. ತುಳುವನಾಗಿ ಕೊರಗಜ್ಜನ ಭಕ್ತನಾಗಿ ಅದೇ ಕಾರಣೀಕ ದೈವಕ್ಕೆ ಅಪಚಾರ ಎಸಗಲು ಸಾಧ್ಯವೇ..? ಕಲ್ಜಿಗ ಚಿತ್ರದಲ್ಲಿ ಅಜ್ಜನ ಮಹಿಮೆಯನ್ನಷ್ಟೆ ತೋರಿಸುವ ಪ್ರಯತ್ನ ಮಾಡಿದ್ದೇವೆ.


ಈಗಾಗಲೇ ಕಲ್ಜಿಗ ಚಿತ್ರದ ಪ್ರೀಮಿಯರ್ ಷೋ ವೀಕ್ಷಿಸಿರುವ ಪ್ರೇಕ್ಷಕರು ಚಿತ್ರವನ್ನು ಮೆಚ್ಚಿ ಪ್ರೋತ್ಸಾಹಿಸುತ್ತಿದ್ದಾರೆ. ಚಿತ್ರ ತಂಡದ ಮೇಲೆ ಅಜ್ಜನ ಆಶೀರ್ವಾದ ಇದೆ ಅನ್ನುವುದು ಚಿತ್ರದ ಶೂಟಿಂಗ್ ನಿಂದ ಹಿಡಿದು ಇದುವರೆಗೆ ನಡೆದ ಸನ್ನಿವೇಶಗಳೆಲ್ಲವೂ ತೋರಿಸಿಕೊಟ್ಟಿದೆ. ಚಿತ್ರದ ಬಗ್ಗೆ ಯಾರು ಅಪಪ್ರಚಾರ ಮಾಡುತ್ತಿದ್ದಾರೋ ಅವರು ಒಮ್ಮೆ ಚಿತ್ರ ವೀಕ್ಷಿಸಲಿ. ಬಳಿಕ ಅವರು ಎಲ್ಲಿಗೆ ಕರೆಯುತ್ತಾರೋ ಅಲ್ಲಿಗೆ ಮೊದಲು ನಾನೇ ಚರ್ಚೆಗೆ ಹೋಗಲು ಸಿದ್ಧನಿದ್ದೇನೆ. ಸಿನೆಮಾವನ್ನು ಒಮ್ಮೆಯೂ ನೋಡದೆ, ಸಿನೆಮಾ ವೀಕ್ಷಣೆಯನ್ನ ತಡೆಯುವ ಬಗ್ಗೆ ಮಾತನಾಡೋದು ಸಮಂಜಸವಲ್ಲ. ಇಡೀ ಚಿತ್ರ ತಂಡವೇ ಕೊರಗಜ್ಜನ ಭಕ್ತರಾಗಿರುವುದರಿಂದ ಅಜ್ಜನ ದಯೆ ಸದಾ ನಮಗೆ ಇದೆಯೆಂದು ಅರ್ಜುನ್ ಕಾಪಿಕಾಡು ಹೇಳಿದರು.
ಅಜ್ಜನ ಕೃಪೆಯಿಂದಲೇ ಕಾಂತಾರ-2 ರಲ್ಲಿ ಅವಕಾಶ
ಒಂದೂವರೆ ವರ್ಷದ ಹಿಂದೆ ಕಲ್ಜಿಗ ಚಿತ್ರದ ಶೂಟಿಂಗ್ ಆರಂಭವಾದ ಬಳಿಕ ನನಗೆ ಶುಭ ಘಳಿಗೆಯೇ ಆರಂಭವಾಗಿದೆ. ಕೊರಗಜ್ಜನ ಕೃಪಾಕಟಾಕ್ಷದಿಂದ ರಿಷಬ್ ಶೆಟ್ಟಿಯವರ ಬಹು ನಿರೀಕ್ಷಿತ ಚಿತ್ರ ಕಾಂತಾರ-2 ರಲ್ಲಿ ಬ್ಯಾಕ್ ಗ್ರೌಂಡ್ ನಿರ್ದೇಶಕನಾಗಿ ಸೇವೆ ಸಲ್ಲಿಸುವ ಅವಕಾಶ ಒದಗಿ ಬಂದಿದೆ. ಸಸಿಹಿತ್ಲಿನ ಕಲ್ಜಿಗ ಚಿತ್ರದ ಶೂಟಿಂಗ್ ಸ್ಪಾಟ್ ನಲ್ಲಿ ಯಾವುದೇ ರೀತಿಯ ಅಡಚಣೆಗಳಾಗಿರಲಿಲ್ಲ. ಅಜ್ಜನ ದಯೆಯಿಂದ ದಿನವಿಡೀ ಶೂಟಿಂಗ್ ನಡೆಸಿದರೂ ನಮಗೆ ಸುಸ್ತೇ ಆಗಿರಲಿಲ್ಲ ಎಂದು ಅರ್ಜುನ್ ಕಾಪಿಕಾಡ್ ಹೇಳಿದರು.
ಈ ಸಂದರ್ಭ ಕಲ್ಜಿಗ ಚಿತ್ರದ ನಿರ್ಮಾಪಕ ಶರತ್ ಕುಮಾರ್, ನಿರ್ದೇಶಕ ಸುಮನ್ ಸುವರ್ಣ, ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳದ ನವೀನ್ ಕಾಯಂಗಳ, ಪ್ರಸಾದ್ ಕಾಯಂಗಳ, ವನಿತಾ ಗಿರೀಶ್, ಪುರುಷೋತ್ತಮ್ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
"I have always been a devotee of Ajja, and as a true Tuluva, I have worked to promote the Tulu language. Through my efforts, I have tried to highlight the miraculous powers of Ajja. Visiting Kallarpu Burdugoli Guliga Koragajja Adisthala brings a sense of peace and lightness to the mind. Anyone who visits here will feel reluctant to leave, as it helps release the burdens we carry," said Arjun Kapikad, lead actor of the Kannada film Kalchiga.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm