ಬ್ರೇಕಿಂಗ್ ನ್ಯೂಸ್
16-09-24 06:30 pm Mangalore Correspondent ಕರಾವಳಿ
ಮಂಗಳೂರು, ಸೆ.16 : “ವಿದ್ಯಾರ್ಥಿಗಳಿಗೆ ಸಂಶೋಧನಾ ವಿಚಾರ ಹಾಗೂ ರಾಷ್ಟ್ರೀಯ, ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳ ಬಗ್ಗೆ ಅರಿಯಲು ಕೊರೊನಾ ಮೊದಲು 400-450 ಶಾಲೆಗಳಲ್ಲಿ ಈ ಕಾರ್ಯಕ್ರಮ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಸೆ.18ರಂದು ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಭಾರತ್ ಸಿನೆಮಾಸ್ ನಲ್ಲಿ ಇನ್ನೊವೇಶನ್ ಸಮ್ಮಿಟ್ ಎಕ್ಸ್ ಪೋ 1.O ಅನ್ನು ಹಮ್ಮಿಕೊಳ್ಳಲಾಗಿದೆ“ ಎಂದು ಇನೊನೆಕ್ಸ್ಟ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರೊ.ಶ್ರೀನಿವಾಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಆನ್ಲೈನ್ ಮುಖಾಂತರ ವೈಜ್ಞಾನಿಕ ವರ್ತಮಾನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಸ್ರೋ ವಿಜ್ಞಾನಿ ಪ್ರೊ.ಆರ್.ಆರ್. ಇಲಂಗೋವನ್ ಮುಖ್ಯ ಅಥಿತಿಗಳಾಗಿದ್ದು ವಿದ್ಯಾರ್ಥಿಗಳಿಗೆ ಸಂಶೋಧನಾ ವಿಚಾರ ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳ ಜೊತೆ ವಿದ್ಯಾರ್ಥಿಗಳು ಹೇಗೆ ಸಂಪರ್ಕವನ್ನು ಬೆಳೆಸಿಕೊಳ್ಳಬೇಕು ಹಾಗೂ ಶಾಲಾ ಸಂಸ್ಥೆಗಳ ಪಾತ್ರ ಏನು ಎಂಬುದರ ಬಗ್ಗೆ ತಿಳಿಸಿಕೊಡುತ್ತಾರೆ. ಈ ಕಾರ್ಯಕ್ರಮವು ಭಾರತ್ ಸಿನಿಮಾಸ್ನ 4ಕೆ ಪರದೆಯಲ್ಲಿ ಆಕಾಶಕಾಯಗಳ ನೇರ Simulation ಪ್ರದರ್ಶನ ಹಾಗೂ 3ಡಿ ಶೋ ಕಾರ್ಯಕ್ರಮ ಒಳಗೊಂಡಿರುತ್ತದೆ“ ಎಂದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ.ಕೆ.ವಿ ರಾವ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಜಯಶ್ರೀ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮೊಹಮ್ಮದ್ ಉಪಸ್ಥಿತರಿರಲಿದ್ದಾರೆ.
ಈ ರೀತಿಯ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲನೆಯದ್ದಾಗಿದ್ದು ಎಲ್ಲ ಶಾಲಾ ಪ್ರಾಂಶುಪಾಲರು ಮತ್ತು ವಿಜ್ಞಾನ ಶಿಕ್ಷಕರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು. ಹೆಚ್ಚಿನ ಮಾಹಿತಿಗಾಗಿ 9008767187 ನಂಬರ್ ಅನ್ನು ಸಂಪರ್ಕಿಸಬಹುದಾಗಿದೆ. ಪತ್ರಿಕಾಗೋಷ್ಟಿಯಲ್ಲಿ ಸಂಸ್ಥೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ದಿವಾಕರ್, ಅನು ಮತ್ತಿತರರು ಉಪಸ್ಥಿತರಿದ್ದರು.
Mangalore Sep 18 big cinemas to host innovation summit expo for students.
27-05-26 04:58 pm
HK News Staffer
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm