ಬ್ರೇಕಿಂಗ್ ನ್ಯೂಸ್
16-09-24 09:09 pm Mangalore Correspondent ಕರಾವಳಿ
ಮಂಗಳೂರು, ಸೆ.16: ತಾಪಮಾನ ಹೆಚ್ಚಳದಿಂದಾಗಿ ಭೂಮಿಯ ಮೇಲೆ ತೀವ್ರ ತೆರನಾದ ಪರಿಣಾಮಗಳಾಗುತ್ತಿದ್ದು, ಒಂದೆಡೆ ವಾತಾವರಣದಲ್ಲಿ ಉಷ್ಣತೆ ಹೆಚ್ಚಳ ಮತ್ತು ಅತಿಯಾದ ಮಳೆಯಿಂದ ವಿಕೋಪಗಳು ಉಂಟಾಗಲಿವೆ. ಇದರಿಂದಾಗಿ ಮುಂದಿನ 20 ವರ್ಷಗಳಲ್ಲಿ ಜಗತ್ತಿನ ಒಟ್ಟು ಜನಸಂಖ್ಯೆಯ 70 ಶೇಕಡಾ ಜನರು ಪೀಡಿತರಾಗಲಿದ್ದಾರೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.
ತಾಪಮಾನ ಹೆಚ್ಚಳದ ಬಗ್ಗೆ ಗಂಭೀರ ಕ್ರಮಗಳನ್ನು ಕೈಗೊಳ್ಳದೇ ಇದ್ದರೆ, ಜಗತ್ತಿನ 70 ಶೇಕಡಾ ಜನರು ತೀವ್ರ ಪೀಡನೆಗೆ ಒಳಗಾಗಲಿದ್ದಾರೆ. ಗಂಭೀರ ಕ್ರಮಗಳನ್ನು ತೆಗೆದುಕೊಂಡರೆ ಇದರಲ್ಲಿ 20 ಶೇಕಡಾ ಪರಿಣಾಮ ಇಳಿಕೆಯಾಗಲಿದೆ ಎಂದು ಸೆಂಟರ್ ಫಾರ್ ಇಂಟರ್ ನ್ಯಾಶನಲ್ ಕ್ಲೈಮೇಟ್ ರಿಸರ್ಚ್ ಸಂಸ್ಥೆಯ ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಅತಿಯಾದ ಇಂಗಾಲದ ಹೊಸ ಸೂಸುವಿಕೆಯಿಂದಾಗಿ ಈಗಾಗಲೇ ಭೂಮಿಯ ಸಮತೋಲನ ತಪ್ಪಿದೆ. ಅತಿ ವೃಷ್ಟಿ, ಬರದಂತಹ ಸನ್ನಿವೇಶಗಳು ಎದುರಾಗಿವೆ. ಭೀಕರ ಮಳೆಯಿಂದಾಗಿ ಬಸವಳಿದರೆ, ಅತಿಯಾದ ಬಿಸಿಲಿನಿಂದಾಗಿ ಜನರು ತತ್ತರಿಸುವ ಸ್ಥಿತಿ ಬಂದಿದೆ. ಈ ರೀತಿಯ ತೊಂದರೆಗಳು ಮುಂದಿನ 20 ವರ್ಷಗಳಲ್ಲಿ ಭೀಕರ ರೂಪ ತಾಳಲಿವೆ. ವಿಶ್ವ ರಾಷ್ಟ್ರಗಳು ಈ ಬಗ್ಗೆ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಏಶ್ಯಾ ರಾಷ್ಟ್ರಗಳಲ್ಲಿ ವಾಯು ಮಾಲಿನ್ಯ ಹೆಚ್ಚಿದ್ದು, ಇದರಿಂದ ಮನುಷ್ಯನ ಮೇಲೆ ನೇರ ಪರಿಣಾಮ ಬೀರಲಿದೆ. ಇದಲ್ಲದೆ, ಜಾಗತಿಕ ತಾಪಮಾನಕ್ಕೂ ದೊಡ್ಡ ಕೊಡುಗೆ ನೀಡುತ್ತಿದೆ. ಮಾಲಿನ್ಯಕಾರಿ ಅನಿಲ ಬಿಡುಗಡೆಯನ್ನು ಅಗತ್ಯವಾಗಿ ಸ್ವಚ್ಛ ಮಾಡಬೇಕಿದೆ ಎಂದು ನೇಚರ್ ಜಿಯೋ ಸೈನ್ಸ್ ನಲ್ಲಿ ಪ್ರಕಟವಾದ ವರದಿಯಲ್ಲಿ ವಿಜ್ಞಾನಿಗಳು ಬೊಟ್ಟು ಮಾಡಿದ್ದಾರೆ. ಜಾಗತಿಕ ತಾಪಮಾನಕ್ಕೆ ಕೊಡುಗೆ ನೀಡಬಲ್ಲ ವಾಯುಮಾಲಿನ್ಯದ ಬಗ್ಗೆ ಅಗತ್ಯವಾಗಿ ಮುನ್ನೆಚ್ಚರಿಕೆ ವಹಿಸಬೇಕೆಂದು ವಿಜ್ಞಾನಿಗಳು ಒತ್ತಾಯ ಮಾಡಿದ್ದಾರೆ.
Nearly three-quarters of the global population could face rapid and intense changes in extreme weather patterns within the next two decades unless greenhouse gas emissions are significantly reduced, according to a new study published in Nature Geoscience.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm