ಬ್ರೇಕಿಂಗ್ ನ್ಯೂಸ್
16-09-24 09:09 pm Mangalore Correspondent ಕರಾವಳಿ
ಮಂಗಳೂರು, ಸೆ.16: ತಾಪಮಾನ ಹೆಚ್ಚಳದಿಂದಾಗಿ ಭೂಮಿಯ ಮೇಲೆ ತೀವ್ರ ತೆರನಾದ ಪರಿಣಾಮಗಳಾಗುತ್ತಿದ್ದು, ಒಂದೆಡೆ ವಾತಾವರಣದಲ್ಲಿ ಉಷ್ಣತೆ ಹೆಚ್ಚಳ ಮತ್ತು ಅತಿಯಾದ ಮಳೆಯಿಂದ ವಿಕೋಪಗಳು ಉಂಟಾಗಲಿವೆ. ಇದರಿಂದಾಗಿ ಮುಂದಿನ 20 ವರ್ಷಗಳಲ್ಲಿ ಜಗತ್ತಿನ ಒಟ್ಟು ಜನಸಂಖ್ಯೆಯ 70 ಶೇಕಡಾ ಜನರು ಪೀಡಿತರಾಗಲಿದ್ದಾರೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.
ತಾಪಮಾನ ಹೆಚ್ಚಳದ ಬಗ್ಗೆ ಗಂಭೀರ ಕ್ರಮಗಳನ್ನು ಕೈಗೊಳ್ಳದೇ ಇದ್ದರೆ, ಜಗತ್ತಿನ 70 ಶೇಕಡಾ ಜನರು ತೀವ್ರ ಪೀಡನೆಗೆ ಒಳಗಾಗಲಿದ್ದಾರೆ. ಗಂಭೀರ ಕ್ರಮಗಳನ್ನು ತೆಗೆದುಕೊಂಡರೆ ಇದರಲ್ಲಿ 20 ಶೇಕಡಾ ಪರಿಣಾಮ ಇಳಿಕೆಯಾಗಲಿದೆ ಎಂದು ಸೆಂಟರ್ ಫಾರ್ ಇಂಟರ್ ನ್ಯಾಶನಲ್ ಕ್ಲೈಮೇಟ್ ರಿಸರ್ಚ್ ಸಂಸ್ಥೆಯ ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಅತಿಯಾದ ಇಂಗಾಲದ ಹೊಸ ಸೂಸುವಿಕೆಯಿಂದಾಗಿ ಈಗಾಗಲೇ ಭೂಮಿಯ ಸಮತೋಲನ ತಪ್ಪಿದೆ. ಅತಿ ವೃಷ್ಟಿ, ಬರದಂತಹ ಸನ್ನಿವೇಶಗಳು ಎದುರಾಗಿವೆ. ಭೀಕರ ಮಳೆಯಿಂದಾಗಿ ಬಸವಳಿದರೆ, ಅತಿಯಾದ ಬಿಸಿಲಿನಿಂದಾಗಿ ಜನರು ತತ್ತರಿಸುವ ಸ್ಥಿತಿ ಬಂದಿದೆ. ಈ ರೀತಿಯ ತೊಂದರೆಗಳು ಮುಂದಿನ 20 ವರ್ಷಗಳಲ್ಲಿ ಭೀಕರ ರೂಪ ತಾಳಲಿವೆ. ವಿಶ್ವ ರಾಷ್ಟ್ರಗಳು ಈ ಬಗ್ಗೆ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಏಶ್ಯಾ ರಾಷ್ಟ್ರಗಳಲ್ಲಿ ವಾಯು ಮಾಲಿನ್ಯ ಹೆಚ್ಚಿದ್ದು, ಇದರಿಂದ ಮನುಷ್ಯನ ಮೇಲೆ ನೇರ ಪರಿಣಾಮ ಬೀರಲಿದೆ. ಇದಲ್ಲದೆ, ಜಾಗತಿಕ ತಾಪಮಾನಕ್ಕೂ ದೊಡ್ಡ ಕೊಡುಗೆ ನೀಡುತ್ತಿದೆ. ಮಾಲಿನ್ಯಕಾರಿ ಅನಿಲ ಬಿಡುಗಡೆಯನ್ನು ಅಗತ್ಯವಾಗಿ ಸ್ವಚ್ಛ ಮಾಡಬೇಕಿದೆ ಎಂದು ನೇಚರ್ ಜಿಯೋ ಸೈನ್ಸ್ ನಲ್ಲಿ ಪ್ರಕಟವಾದ ವರದಿಯಲ್ಲಿ ವಿಜ್ಞಾನಿಗಳು ಬೊಟ್ಟು ಮಾಡಿದ್ದಾರೆ. ಜಾಗತಿಕ ತಾಪಮಾನಕ್ಕೆ ಕೊಡುಗೆ ನೀಡಬಲ್ಲ ವಾಯುಮಾಲಿನ್ಯದ ಬಗ್ಗೆ ಅಗತ್ಯವಾಗಿ ಮುನ್ನೆಚ್ಚರಿಕೆ ವಹಿಸಬೇಕೆಂದು ವಿಜ್ಞಾನಿಗಳು ಒತ್ತಾಯ ಮಾಡಿದ್ದಾರೆ.
Nearly three-quarters of the global population could face rapid and intense changes in extreme weather patterns within the next two decades unless greenhouse gas emissions are significantly reduced, according to a new study published in Nature Geoscience.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm