ಬ್ರೇಕಿಂಗ್ ನ್ಯೂಸ್
16-09-24 09:12 pm Mangalore Correspondent ಕರಾವಳಿ
ಮಂಗಳೂರು, ಸೆ.16 : ಅತ್ತೆಯ ಜೀವ ಉಳಿಸಲು ಲಿವರ್ ದಾನ ಮಾಡಲು ಹೋದ ಉಪನ್ಯಾಸಕಿಯೊಬ್ಬರು ತನ್ನ ಜೀವವನ್ನೇ ಕಳಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ನಾಲ್ಕು ವರ್ಷದ ಮಗು ಅನಾಥವಾಗಿದೆ. ಗಂಡ ಮಂಗಳೂರಿನ ಪ್ರಸಿದ್ಧ ಲೆಕ್ಕ ಪರಿಶೋಧಕ ಶಾಕ್ ಆಗುವಂತಾಗಿದೆ.
ನಗರದ ಕರಂಗಲ್ಪಾಡಿ ನಿವಾಸಿ, ಮಂಗಳೂರಿನ ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ ಅರ್ಚನಾ ಕಾಮತ್(33) ಮೃತ ದುದೈವಿ.
ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ತಂದೆ ಸಿ.ಎ ಸತೀಶ್ ಕಾಮತ್ ಅವರ ಸಹೋದರನ ಪತ್ನಿಗೆ ಲಿವರ್ ಸಮಸ್ಯೆ ಇದ್ದುದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಲಿವರ್ ಕಸಿ ಮಾಡಲು ನಿರ್ಧರಿಸಲಾಗಿತ್ತು. ಹಲವರು ಲಿವರ್ ನೀಡಲು ಬಂದರಾದರೂ, ಮ್ಯಾಚ್ ಆಗದ ಕಾರಣ ಚಿಕಿತ್ಸೆಗೆ ಹಿನ್ನಡೆಯಾಗಿತ್ತು. ಈ ವೇಳೆ ಅರ್ಚನಾ ಕಾಮತ್ ತನ್ನ ಲಿವರ್ ಮ್ಯಾಚ್ ಆಗುತ್ತಾ ಎಂದು ಟೆಸ್ಟ್ ಮಾಡಲು ಮಂದಾಗಿದ್ದರು. ಬಳಿಕ ವೈದ್ಯರ ಸಲಹೆಯಂತೆ ಅರ್ಚನಾ ತನ್ನ ಕುಟುಂಬಸ್ಥರನ್ನು ಒಪ್ಪಿಸಿ ಲಿವರ್ ದಾನಕ್ಕೆ ನಿರ್ಧರಿಸಿದ್ದರು. ನಿಗದಿತ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಲಿವರ್ ಕಸಿ ಮಾಡಲಾಗಿತ್ತು.
ಏಕಕಾಲದಲ್ಲಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಲಿವರ್ ಕಸಿ ಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆ ನಂತರ ಅರ್ಚನಾ ಕಾಮತ್ ಆರೋಗ್ಯದಿಂದಿದ್ದರು. ಮೂರು ದಿನಗಳ ಆಸ್ಪತ್ರೆ ವಾಸದ ಬಳಿಕ ಅಪೋಲೊ ಆಸ್ಪತ್ರೆಯಿಂದ ಎರಡು ದಿನಗಳ ಹಿಂದೆ ಮಂಗಳೂರಿನ ಮನೆಗೆ ಹಿಂತಿರುಗಿದ್ದರು. ಈ ನಡುವೆ, ಅರ್ಚನಾ ಕಾಮತ್ ಅವರ ಆರೋಗ್ಯದಲ್ಲಿ ಸಮಸ್ಯೆ ಕಂಡಿದ್ದರಿಂದ ಮತ್ತೆ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಮಂಗಳೂರಿನಿಂದ ಬೆಂಗಳೂರು ತಲುಪುವಷ್ಟರಲ್ಲಿ ಅರ್ಚನಾ ದೇಹದಲ್ಲಿ ಬಹು ಅಂಗಾಂಗ ವೈಪಲ್ಯ ಆಗಿದ್ದು ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತದೇಹವನ್ನು ಕರಂಗಲ್ಪಾಡಿಯಯ ನಿವಾಸಕ್ಕೆ ತಂದು ವಿಧಿ ವಿಧಾನ ನೆರವೇರಿಸಿದ ಬಳಿಕ ಕುಂದಾಪುರದ ಕೋಟೆಶ್ವರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅರ್ಚನಾ ಮೂಲತಃ ಕುಂದಾಪುರದವರಾಗಿದ್ದು ಮಂಗಳೂರಿಗೆ ಮದುವೆಯಾಗಿ ಬಂದಿದ್ದರು. ಆ ಕರ್ಣನಂತೆ, ನೀ ದಾನಿಯಾದೆ ಇನ್ನೊಂದು ಜೀವಕ್ಕೆ ನೀ ಆಧಾರವಾದೆ ಎಂಬ ವಿಷ್ಣುವರ್ಧನ್ ನಟನೆಯ ಸಿನಿಮಾದ ಹಾಡಿನಂತೆ ಅರ್ಚನಾ ಕಾಮತ್ ಜೀವವೂ ಇನ್ನೊಬ್ಬರಿಗೆ ಜೀವ ಕೊಟ್ಟು ತನ್ನ ಜೀವ ತ್ಯಾಗ ಮಾಡಿದಂತಾಗಿದೆ.
33 year old teacher dies after donation liver to mother in law in Mangalore. The deceased has been identified as Archana Kamath from Karangalpady.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm