ಬ್ರೇಕಿಂಗ್ ನ್ಯೂಸ್
17-09-24 03:43 pm HK News Desk ಕರಾವಳಿ
ಮಂಗಳೂರು, ಸೆ.17: “ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಸಹಕಾರ ಇಲಾಖೆಯಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಸಂಘವಾಗಿದೆ. ಬೀದಿ ಬದಿ ವ್ಯಾಪಾರಕ್ಕೆ ಸಂಬಂಧಪಟ್ಟ ಯಾವುದೇ ಅನಧಿಕೃತವಾಗಿರುವಂತಹ ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷದ ಲಾಭಕ್ಕಾಗಿ ಬೀದಿ ಬದಿ ವ್ಯಾಪಾರಿಗಳನ್ನು ಸ್ವಂತ ಲಾಭಕ್ಕೆ
ಉಪಯೋಗಿಸಿಕೊಳ್ಳುವ ಯಾವುದೇ ಸಂಘಟನೆಗಳಿಗೆ ಮಹತ್ವವನ್ನು ಕೊಡಬಾರದು“ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿ ಮನವಿ ಮಾಡಿದರು.
”ಬೀದಿ ಬದಿ ವ್ಯಾಪಾರಸ್ಥರ ಸಂಘಟನೆ ಎಂಬ ಹೆಸರಿನ ಯಾವುದೇ ರಾಜಕೀಯ ಪ್ರೇರಿತ ಪಕ್ಷದ ಹೆಸರಿನಲ್ಲಿ ನಿಮಗೆ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ನಿಮ್ಮ ಬಳಿ ಬಂದರೆ ಜಾಗರೂಕರಾಗಿರಿ. ನಾವೆಲ್ಲರೂ ಮೋಸ ಹೋಗಿದ್ದೇವೆ. ನಮಗೆಲ್ಲರಿಗೂ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ಹೇಳಿ ಮೋಸ ಮಾಡಿದ ಬಿ.ಕೆ.ಇಮ್ತಿಯಾಜ್ ಇವರನ್ನು ನಮ್ಮ ಶ್ರೇಯೋಭಿವೃದ್ಧಿ ಸಂಘದಿಂದ ವಜಾಗೊಳಿಸಿದ್ದೇವೆ. ಇವರನ್ನು ವಜಾಗೊಳಿಸಿದ ಕೇವಲ ಒಂದು ತಿಂಗಳ ಒಳಗೆ 93 ಬೀದಿ ವ್ಯಾಪಾರಿಗಳಿಗೆ ಪ್ರಮಾಣಪತ್ರ ಸಿಕ್ಕಿದೆ.
ಬೀದಿ ವ್ಯಾಪಾರಿಗಳ ಪ್ರಮಾಣ ಪತ್ರಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಬೀದಿ ಬದಿ ವ್ಯಾಪಾರದ ಪ್ರಮಾಣ ಪತ್ರಕ್ಕೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಮಕ್ಷಮದೊಂದಿಗೆ ನಡೆಯುತ್ತಿದೆ. ಯಾರು ಗೊಂದಲಕ್ಕೊಳಗಾಗುವ ಅವಶ್ಯಕತೆ ಇಲ್ಲ. ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ನಿರ್ದೇಶಕರೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಬಿ.ಕೆ.ಇಮ್ತಿಯಾಜ್ ಅವರಿಂದ ನಡೆದಿದೆ. ಇವರನ್ನು ನಮ್ಮ ಸಂಘದಿಂದ ವಜಾಗೊಳಿಸುವ ಮೊದಲೇ ಅಧ್ಯಕ್ಷ ಸ್ಥಾನಕ್ಕೆ ಮತ್ತು ನಿರ್ದೇಶಕ ಸ್ಥಾನಕ್ಕೆ ತನ್ನ ವೈಯುಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದಾರೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಘದ ನಿರ್ದೇಶಕ ಪ್ರವೀಣ್ ಕುಮಾರ್, ಮುಹಮ್ಮದ್ ಮುಸ್ತಫ, ಅಬ್ದುಲ್ ರಹಿಮಾನ್, ಇಸ್ಮಾಯಿಲ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.
Mangalore Street Vendors Assn says not to trust any unauthorised institutions or persons that state of giving justice should not be beleived says Association persons holding press meet at press club in Mangalore.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm