ಬ್ರೇಕಿಂಗ್ ನ್ಯೂಸ್
10-12-20 12:07 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.10: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಇಂದಿನಿಂದ ಡಿ.14 ರ ವರೆಗೆ ನಡೆಯಲಿದೆ. 13 ಮತ್ತು 14 ರಂದು 88ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ನಿಯಮಗಳನ್ನು ಪಾಲಿಸಿಕೊಂಡು ಸರಳವಾಗಿ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಡಿ.10ರಂದು ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ಡಿ.14ರಂದು ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.


ಲಕ್ಷ ದೀಪೋತ್ಸವದ ಯಶಸ್ವಿಗಾಗಿ ಕ್ಷೇತ್ರದಿಂದ ಸಮಿತಿಗಳನ್ನು ರಚಿಸಲಾಗಿದ್ದು, ಸಕಲ ಸಿದ್ದತೆಗಳನ್ನು ನಡೆಸಲಾಗಿದೆ. ದೇವರು ಸವಾರಿ ಮಾಡುವ ರಥಬೀದಿ, ರಾಜ ಬೀದಿಗಳನ್ನು, ದೇವಸ್ಥಾನ, ಬೀಡು, ಅನ್ನಪೂರ್ಣ ಸೇರಿದಂತೆ ಕ್ಷೇತ್ರದಲ್ಲಿ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ.
ಭಕ್ತರ ಸುರಕ್ಷತೆಯ ನಿಟ್ಟಿನಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತರು ಮಾಸ್ಕ್ ಕಡ್ಡಾಯ ಧಾರಣೆ ಮಾಡಬೇಕು. ವಸ್ತು ಪ್ರದರ್ಶನ ಹಾಗೂ ಬೀದಿ ಬದಿಯ ಅಂಗಡಿಗಳು ಇರುವುದಿಲ್ಲ. ಸರಕಾರದ ನಿಯಮದಂತೆ ಅಗತ್ಯ ಕ್ರಮಗಳೊಂದಿಗೆ ದೀಪೋತ್ಸವ ಸರಳವಾಗಿ ಆಚರಣೆಗೊಳ್ಳಲಿದೆ. ಈ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಮನೆಯಲ್ಲೇ ಕುಳಿತು ವೀಕ್ಷಣೆ ಮಾಡಲು ಅವಕಾಶ ಮಾಡಲಾಗಿದೆ. ’ಶ್ರೀ ಕ್ಷೇತ್ರ ಧರ್ಮಸ್ಥಳ’ ಹೆಸರಿನ ಯೂಟ್ಯೂಬ್, ಫೇಸ್ಬುಕ್ ಹಾಗೂ ನಮ್ಮ ಕುಡ್ಲ, ಶ್ರೀಶಂಕರ ಟಿವಿಯಲ್ಲಿ ನೇರ ವೀಕ್ಷಣೆಗೆ ಕ್ಷೇತ್ರದಿಂದ ಅವಕಾಶ ಮಾಡಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
A Laksha Deepotsava will be held at Dharmasthala for four days from December 10, 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am