ಬ್ರೇಕಿಂಗ್ ನ್ಯೂಸ್
19-09-24 04:53 pm HK News Desk ಕರಾವಳಿ
ಮಂಗಳೂರು, ಸೆ.19: ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಗೆ ವಿಧಾನ ಪರಿಷತ್ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನ. 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯ ವರೆಗೆ ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ಎರಡು ಜಿಲ್ಲೆಗಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಹೀಗಾಗಿ ಶಾಸಕ, ಸಂಸದರು ಅಧಿಕಾರಿಗಳ ಜೊತೆಗೆ ಸಭೆ ನಡೆಸುವಂತಿಲ್ಲ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸಂಜೆ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಕರೆಯಲಾಗಿದ್ದ ರೈಲ್ವೆ ಅಧಿಕಾರಿಗಳ ಸಭೆಯನ್ನು ರದ್ದುಪಡಿಸಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಕಳೆದ ಮೇ 5ರಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಪರಿಷತ್ ಅವಧಿ 2028ರ ವರೆಗೆ ಇದೆ. ಉಳಿಕೆ ಅವಧಿಗೆ ಸದಸ್ಯರಾಗಲು ಉಪ ಚುನಾವಣೆ ನಡೆಸಲಾಗುತ್ತಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಗ್ರಾಪಂ, ಜಿಪಂ, ನಗರ ಪಂ., ಪುರಸಭೆ, ಮಹಾನಗರ ಪಾಲಿಕೆ ಹೀಗೆ ಎಲ್ಲ ಸ್ತರದ ಸ್ಥಳೀಯಾಡಳಿತ ಸದಸ್ಯರಿಗೆ ಮತದಾನ ಅವಕಾಶ ಇರುತ್ತದೆ.
ಕರ್ನಾಟಕ ವಿಧಾನ ಪರಿಷತ್ ನ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗ ಇಂದು ಉಪಚುನಾವಣೆಯನ್ನು ಘೋಷಿಸಿದೆ. pic.twitter.com/r5DuKNqmrr
— Chief Electoral Officer, Karnataka (@ceo_karnataka) September 19, 2024
By elections date announced for vacant post of Kota Srinivas Poojary on october 21st, 2024
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm