ಬ್ರೇಕಿಂಗ್ ನ್ಯೂಸ್
19-09-24 04:53 pm HK News Desk ಕರಾವಳಿ
ಮಂಗಳೂರು, ಸೆ.19: ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಗೆ ವಿಧಾನ ಪರಿಷತ್ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನ. 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯ ವರೆಗೆ ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ಎರಡು ಜಿಲ್ಲೆಗಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಹೀಗಾಗಿ ಶಾಸಕ, ಸಂಸದರು ಅಧಿಕಾರಿಗಳ ಜೊತೆಗೆ ಸಭೆ ನಡೆಸುವಂತಿಲ್ಲ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸಂಜೆ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಕರೆಯಲಾಗಿದ್ದ ರೈಲ್ವೆ ಅಧಿಕಾರಿಗಳ ಸಭೆಯನ್ನು ರದ್ದುಪಡಿಸಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಕಳೆದ ಮೇ 5ರಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಪರಿಷತ್ ಅವಧಿ 2028ರ ವರೆಗೆ ಇದೆ. ಉಳಿಕೆ ಅವಧಿಗೆ ಸದಸ್ಯರಾಗಲು ಉಪ ಚುನಾವಣೆ ನಡೆಸಲಾಗುತ್ತಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಗ್ರಾಪಂ, ಜಿಪಂ, ನಗರ ಪಂ., ಪುರಸಭೆ, ಮಹಾನಗರ ಪಾಲಿಕೆ ಹೀಗೆ ಎಲ್ಲ ಸ್ತರದ ಸ್ಥಳೀಯಾಡಳಿತ ಸದಸ್ಯರಿಗೆ ಮತದಾನ ಅವಕಾಶ ಇರುತ್ತದೆ.
ಕರ್ನಾಟಕ ವಿಧಾನ ಪರಿಷತ್ ನ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗ ಇಂದು ಉಪಚುನಾವಣೆಯನ್ನು ಘೋಷಿಸಿದೆ. pic.twitter.com/r5DuKNqmrr
— Chief Electoral Officer, Karnataka (@ceo_karnataka) September 19, 2024
By elections date announced for vacant post of Kota Srinivas Poojary on october 21st, 2024
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm