ಬ್ರೇಕಿಂಗ್ ನ್ಯೂಸ್
10-12-20 12:38 pm Mangalore Correspondent ಕರಾವಳಿ
ಮಂಗಳೂರು, ಡಿ.10 : ಕೋವಿಡ್ ಕಾರಣದಿಂದ ಆತಂಕ ಮನೆಮಾಡಿದ್ದ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಕೊನೆಗೂ ರಂಗಸ್ಥಳ ಸಿದ್ಧಗೊಂಡಿದೆ. ಕಟೀಲು ದುರ್ಗಾಪರಮೇಶ್ವರಿ ದೇವಳದ ಯಕ್ಷಗಾನ ಮಂಡಳಿಯ ಆರು ಮೇಳಗಳ ತಿರುಗಾಟಕ್ಕೆ ವೇದಿಕೆ ರೆಡಿಯಾಗಿದ್ದು ಕಲಾವಿದರು ಗೆಜ್ಜೆ ಕಟ್ಟಿದ್ದಾರೆ. ಸಂಪ್ರದಾಯದಂತೆ ದೇವಳದ ಅರ್ಚಕರು ಗೆಜ್ಜೆಗಳನ್ನು ನೀಡುವ ಮೂಲಕ ಆರು ಮೇಳಗಳ ಆಟಕ್ಕೆ ಬುಧವಾರ ರಾತ್ರಿ ಚಾಲನೆ ನೀಡಲಾಗಿದೆ.
ಪ್ರತಿಬಾರಿ ನವೆಂಬರ್ ತಿಂಗಳ ಮಧ್ಯದಲ್ಲಿ ಕಟೀಲು ಮೇಳದ ತಿರುಗಾಟ ಆರಂಭಗೊಳ್ಳುತ್ತದೆ. ಆರಂಭದಲ್ಲಿ ದೇಗುಲದ ವಠಾರದಲ್ಲಿ ಆರೂ ಮೇಳಗಳ ಕಲಾವಿದರು ಪ್ರತ್ಯೇಕ ರಂಗಸ್ಥಳ ನಿರ್ಮಿಸಿ, ಯಕ್ಷಗಾನ ಆಡುತ್ತಾರೆ. ಆರು ಮೇಳದ ಅದ್ಭುತ ಪ್ರದರ್ಶನ ಅಷ್ಟೇ ಅದ್ಧೂರಿಯಾಗಿರುತ್ತದೆ. ಈ ಬಾರಿ ಕೊರೊನಾ ಕಾರಣದಿಂದಾಗಿ ಹಿಂದಿನ ರೀತಿಯ ಅಬ್ಬರ ಇರಲಿಲ್ಲ. ಸಂಪ್ರದಾಯಕ್ಕೆ ಚ್ಯುತಿಯಾಗದಂತೆ ಆಟ ಆಡಿಸಲಾಗಿದೆ. ಕಟೀಲು ದೇವರಿಗೆ ನಮಿಸಿ ಕಲಾವಿದರು ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆಜ್ಜೆ ಕಟ್ಟಿ ಕುಣಿದಿದ್ದಾರೆ. ಈ ಬಾರಿಯ ತಿರುಗಾಟಕ್ಕೆ ಯಾವುದೇ ವಿಘ್ನ ಬಾರದಿರಲೆಂದು ದೇವರಲ್ಲಿ ಬೇಡಿಕೊಂಡು ಮುಂದಿನ ಹೆಜ್ಜೆ ಇಟ್ಟಿದ್ದಾರೆ.
\


ಈಗ ಶುರುವಾದ ತಿರುಗಾಟ ಮೇ ತಿಂಗಳ 25 ವರೆಗೂ ಯಕ್ಷಗಾನ ಸೇವೆ ನಡೆಯುತ್ತದೆ. ಪತ್ತನಾಜೆಗೆ ಮತ್ತೆ ಗೆಜ್ಜೆ ಒಳಗಿಟ್ಟು ಕಲಾವಿದರಿಗೆ ಮಳೆಗಾಲದ ರಜೆ ಸಿಗುತ್ತದೆ. ಆರು ಮೇಳಗಳಿದ್ರೂ ಯಕ್ಷಗಾನ ಆಡಿಸುವುದಕ್ಕೆ ಕೊರತೆ ಇಲ್ಲ. ಸಾಧಾರಣವಾಗಿ ಪ್ರತಿ ವರ್ಷದ ಆಟ ಆಡಿಸುವ ಮಂದಿಯೇ ಹೆಚ್ಚಿದ್ದಾರೆ. ಹೀಗಿದ್ದರೂ, 20 ವರ್ಷಗಳ ಕಾಲ ಯಕ್ಷಗಾನ ಸೇವೆ ಬುಕ್ಕಿಂಗ್ ಇರುವುದು ವಿಶೇಷ.
ಕಟೀಲು ಮೇಳದಲ್ಲಿ ಈ ಬಾರಿ ಕೆಲವು ಬದಲಾವಣೆಗಳೂ ಆಗಿವೆ. ಭಾಗವತ ಪಟ್ಲ ಸತೀಶ ಶೆಟ್ಟಿ ಮೇಳದಿಂದ ಹೊರಬಂದು ಈ ಬಾರಿ ಪಾವಂಜೆ ಹೆಸರಲ್ಲಿ ಹೊಸ ಮೇಳ ಕಟ್ಟಿದ್ದಾರೆ. ಕಟೀಲಿನಲ್ಲಿದ್ದ ಕೆಲವು ಕಲಾವಿದರು ಇತ್ತ ಪಟ್ಲರ ಜೊತೆ ಪಾವಂಜೆ ಮೇಳಕ್ಕೆ ಸೇರಿದ್ದಾರೆ. ಹೀಗಾಗಿ ಕಟೀಲು ಮೇಳದಲ್ಲಿ ಹಳಬರು ಮತ್ತು ಹೊಸಬರ ಸಮ್ಮಿಲನದ ಜೊತೆ ಕಟೀಲು ಕ್ಷೇತ್ರ ಮಹಾತ್ಮೆಯ ಸಿಂಹನಾದಕ್ಕೆ ಕಲಾವಿದರು ರೆಡಿಯಾಗಿದ್ದಾರೆ. ಇಂದಿನಿಂದಲೇ ಕಟೀಲು ಮೇಳದ ಚೆಂಡೆಯ ಅಬ್ಬರ ಕರಾವಳಿಯ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅನುರಣಿಸಲಿದೆ.
Photo Credit: Ravi Posavanike - Times of India
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am