ಬ್ರೇಕಿಂಗ್ ನ್ಯೂಸ್
20-09-24 05:18 pm Mangalore Correspondent ಕರಾವಳಿ
ಮಂಗಳೂರು, ಸೆ.20: ಕೇಂದ್ರ ಸರ್ಕಾರ ಭೂತಾನ್ ದೇಶದಿಂದ ಕನಿಷ್ಠ ಆಮದು ಬೆಲೆಯ ಷರತ್ತಿಲ್ಲದೆ 17,000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದೆ. ಆದರೆ ಇದರಿಂದ ಕರಾವಳಿಯ ಅಡಿಕೆ ಕೃಷಿಕರಿಗೆ ತೊಂದರೆ ಆಗಲ್ಲ ಎನ್ನಲಾಗುತ್ತಿದೆ.
ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ನಲ್ಲಿ ಪ್ರತಿ ವರ್ಷ ಭೂತಾನ್ನಿಂದ ಕನಿಷ್ಠ ಆಮದು ಬೆಲೆ ಇಲ್ಲದೆ, 17,000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿತ್ತು. ಕೇಂದ್ರ ಸರ್ಕಾರ 2017ರಲ್ಲಿ ಪ್ರತಿ ಕೆ.ಜಿ. ಅಡಿಕೆಗೆ 251 ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿಪಡಿಸಿದ್ದು, ಕಳೆದ ವರ್ಷ ಈ ದರವನ್ನು ಕೆಜಿಗೆ 351 ರೂಪಾಯಿಗೆ ಹೆಚ್ಚಳ ಮಾಡಿದೆ.
ಆದರೆ ಭೂತಾನ್ನಿಂದ ಆಮದು ಮಾಡಿಕೊಳ್ಳುವ ಅಡಿಕೆ ಪ್ರಮಾಣ ದೇಶಿಯ ಅಡಿಕೆ ದರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎನ್ನಲಾಗುತ್ತಿದೆ. ದೇಶೀ ವರ್ತಕರು ಇದರ ಲಾಭ ಪಡೆದು ಸ್ಥಳೀಯವಾಗಿ ಬೆಲೆ ಕಡಿಮೆ ಮಾಡುವ ಆತಂಕ ಬೆಳೆಗಾರರಲ್ಲಿ ಇದೆ. ಇದನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆದು ರೈತರಿಗೆ ಬೆಳೆಗೆ ತಕ್ಕ ನ್ಯಾಯಯುತ ಬೆಲೆ ಕೊಡಿಸಬೇಕು ಎಂಬುದು ರೈತರ ಆಗ್ರಹವಾಗಿದೆ. 2023ರಲ್ಲಿ ಭೂತಾನ್ ಅಡಿಕೆ ಭಾರತಕ್ಕೆ ಬಂದಾಗ ಕ್ವಿಂಟಾಲ್ ಅಡಿಕೆ ದರ 4,000 ರೂ. ವರೆಗೆ ಕುಸಿದಿದ್ದು, ಇದೀಗ ಮತ್ತೆ ದರ ಕುಸಿತದ ಆತಂಕದ ಪರಿಸ್ಥಿತಿ ಎದುರಾಗಿದೆ.
ವಿದೇಶಿ ಅಡಿಕೆ ಆಮದಿನಿಂದ ಬೆಳೆಗಾರರಿಗೆ ತೊಂದರೆ ಆಗಲ್ಲ ಎಂದು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ನೆರೆಯ ರಾಷ್ಟ್ರ ಭೂತಾನ್ ರಕ್ಷಣೆ ಹಾಗೂ ಸಹಕಾರದ ಭಾಗವಾಗಿ ಕೇಂದ್ರ ಸರ್ಕಾರ ಅಲ್ಲಿಯ ಅಡಿಕೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಭೂತಾನ್ ಅಡಿಕೆ ಆಮದು ರಾಷ್ಟ್ರೀಯ ಸಹಕಾರ, ಭದ್ರತೆಯ ಭಾಗವಾಗಿ ಕೈಗೊಂಡ ಕ್ರಮವಾಗಿದೆ” ಎಂದು ತಿಳಿಸಿದ್ದಾರೆ.
”ಭೂತಾನ್ ದೇಶದಿಂದ ಕೇವಲ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದ್ದು ಅದನ್ನು ಸಂಸ್ಕರಣೆ ಮಾಡಿದರೆ ಅದು ಬಹಳ ಕಡಿಮೆ ಪ್ರಮಾಣದ ಅಡಿಕೆಯಾಗಿದೆ. ಅಡಿಕೆ ಆಮದು ಬಗ್ಗೆ ಅಡಿಕೆ ಬೆಳೆಗಾರರಲ್ಲಿ ಯಾವುದೇ ಆತಂಕ, ಗಲಿಬಿಲಿ, ಗೊಂದಲ ಬೇಡ” ಎಂದಿದ್ದಾರೆ.
Mangalore Import of areca nut from Bhutan gets green signal by government , CAMPCO says traders not to fear price collapse.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm