ಬ್ರೇಕಿಂಗ್ ನ್ಯೂಸ್
24-09-24 07:23 pm Mangalore Correspondent ಕರಾವಳಿ
ಮಂಗಳೂರು, ಸೆ.24: ಮೂಡಾ ಹಗರಣ ಕುರಿತು ಹೈಕೋರ್ಟ್ ತೀರ್ಪಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ನಗರದ ಪಿವಿಎಸ್ ವೃತ್ತದ ಬಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಇದು ಸತ್ಯಕ್ಕೆ ಸಂದ ಜಯವಾಗಿದೆ. ಮೂಡಾ ಹಗರಣವನ್ನು ಖಂಡಿಸಿ ಬಿಜೆಪಿ ಮೈಸೂರು ಚಲೋ ಯಾತ್ರೆ ನಡೆಸಿದ್ದಾಗ, ಇದು ರಾಜಕೀಯ ಷಡ್ಯಂತ್ರ. ಇದರಲ್ಲಿ ಯಾವುದೇ ಹುರುಳಿಲ್ಲ, ನಾನು ರಾಜೀನಾಮೆ ಕೊಡುವುದಿಲ್ಲ, ಬೇಕಿದ್ದರೆ ರಾಜ್ಯಪಾಲರೇ ರಾಜೀನಾಮೆ ಕೊಡಲಿ ಎಂದು ಭಂಡತನ ಪ್ರದರ್ಶಿಸಿದ್ದ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ತೀರ್ಪು ಕಪಾಳ ಮೋಕ್ಷ ನೀಡಿದೆ. ಇವರ ಹಿಂಬಾಲಕರಂತೂ ರಾಜ್ಯಪಾಲರನ್ನು ಬಾಂಗ್ಲಾ ಮಾದರಿಯಲ್ಲಿ ಓಡಿಸುತ್ತೇವೆ ಎಂದಿದ್ದರು. ಸಾಲದ್ದಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರ ವಿರುದ್ಧ ಸಚಿವ ಸಂಪುಟ ಸಭೆ ನಡೆಸಿ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಈ ಎಲ್ಲಾ ಭ್ರಷ್ಟರಿಗೆ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಸಿಕ್ಕಿದೆ ಎಂದು ಹೇಳಿದರು.


ಈಗಲಾದರೂ ಮುಡಾ ಪ್ರಕರಣದಲ್ಲಿ ತನಿಖೆಗೆ ಸಹಕರಿಸಲು ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಉಳಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿನ ಎಲ್ಲಾ ಹಗರಣಗಳು ಬಯಲಿಗೆ ಬರಲಿದ್ದು ಕಾಂಗ್ರೆಸ್ ಸರ್ಕಾರ ಗಂಟು ಮೂಟೆ ಕಟ್ಟುವುದು ನಿಶ್ಚಿತವೆಂದು ಶಾಸಕರು ಹೇಳಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಮೇಯರ್ ಮನೋಜ್ ಕೋಡಿಕಲ್, ಉಪ ಮೇಯರ್ ಭಾನುಮತಿ ಪಿ.ಎಸ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ನಂದನ್ ಮಲ್ಯ, ರಮೇಶ್ ಹೆಗ್ಡೆ, ಮಂಜುಳಾ ರಾವ್, ಮಹೇಶ್ ಜೋಗಿ, ಪೂಜಾ ಪೈ, ಯತೀಶ್ ಆರ್ವಾರ್, ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.
Muda scam, BJP MLA Vedavyas kamath holds protest demanding resignation of CM Siddaramaiah. BJP members and leaders gathered for the resignation of CM for involving in muda case.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm