ಬ್ರೇಕಿಂಗ್ ನ್ಯೂಸ್
24-09-24 10:16 pm Mangalore Correspondent ಕರಾವಳಿ
ಸುಳ್ಯ, ಸೆ.24: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಆಗಮಿಸಿದ್ದಾಗ ಆಸ್ಪತ್ರೆಯ ಇಬ್ಬರು ವೈದ್ಯರು ಅಗೌರವದಿಂದ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಧೀಶರು ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.
ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿದ್ದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.
ತಾವು ಆಸ್ಪತ್ರೆಗೆ ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಯುವತಿಯ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಕರ್ತವ್ಯದಲ್ಲಿದ್ದ ವೈದ್ಯರು ಅದನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದಾರೆ ಎಂಬುದಾಗಿ ತನಗೆ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಬೇರೇನು ನಡೆದಿದೆ ಎಂಬ ಕುರಿತು ವರದಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Kasaragod Judge reports of disrespect shown by doctors during visit to Sullia hospital.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am