ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am