ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm