ಬ್ರೇಕಿಂಗ್ ನ್ಯೂಸ್
25-09-24 01:21 pm Mangalore Correspondent ಕರಾವಳಿ
ಮಂಗಳೂರು, ಸೆ.25: ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಕಾಸ್ಮೆಟಿಕ್ ಸರ್ಜರಿ ಮಾಡಲು ಹೋಗಿದ್ದ ಯುವಕನೊಬ್ಬ ವೈದ್ಯರ ಎಡವಟ್ಟಿನಿಂದ ದುರಂತ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಉಳ್ಳಾಲದ ಅಕ್ಕರಕೆರೆ ನಿವಾಸಿ ಮೊಹ್ಮದ್ ಮಾಝಿನ್(32) ಮೃತರು. ಮೊಹ್ಮದ್ ಮಾಝಿನ್ ತನ್ನ ಎದೆಯ ಎಡಭಾಗದಲ್ಲಿದ್ದ ಸಣ್ಣ ಗುಳ್ಳೆಯನ್ನು ತೆಗೆಸಲು ಕಂಕನಾಡಿ ಬೆಂದೂರ್ ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ಗೆ ಬಂದಿದ್ದ. ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು.
ಸರ್ಜರಿಗೆ ಮುಂದಾದ ವೈದ್ಯರು ಮಾಝಿನ್ ಅವರನ್ನು ಕ್ಲಿನಿಕ್ ನಲ್ಲಿ ದಾಖಲು ಮಾಡಿಕೊಂಡಿದ್ದರು. ಬೆಳಗ್ಗೆ ಬಂದವರು ಸಂಜೆಯಾದರೂ ಸರ್ಜರಿ ಮುಗಿದಿರಲಿಲ್ಲ. ಹೊರಗೆ ನಿಂತಿದ್ದ ತಾಯಿ ಮತ್ತು ಪತ್ನಿ ಸಂಶಯಗೊಂಡು ವಿಚಾರಿಸಿದ್ದಾರೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೇ ಮಾಝೀನ್ ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಜರಿ ಸಂದರ್ಭದಲ್ಲಿ ಅನಸ್ತೇಶಿಯಾ ಕೊಟ್ಟದ್ದು ಓವರ್ ಡೋಸ್ ಆಗಿದೆ ಎನ್ನಲಾಗುತ್ತಿದ್ದು ಅದೇ ಕಾರಣದಿಂದ ಶಸ್ತ್ರಚಿಕಿತ್ಸೆ ಬಳಿಕ ದೇಹ ಸ್ಥಿರತೆಗೆ ಬಂದಿರಲಿಲ್ಲ.
ಮಾಝಿನ್ ಎರಡು ವರ್ಷದ ಹಿಂದೆ ಮದುವೆಯಾಗಿದ್ದು ಮಕ್ಕಳಾಗಿರಲಿಲ್ಲ. ಈತನ ಅಣ್ಣನೂ ನಾಲ್ಕು ವರ್ಷಗಳ ಹಿಂದೆ ಅಕಾಲಿಕ ಸಾವು ಕಂಡಿದ್ದರು. ಇವರ ಹೆತ್ತವರಿಗೆ ಇಬ್ಬರೇ ಪುತ್ರರಾಗಿದ್ದು ಇಬ್ಬರೂ ದುರಂತ ಸಾವು ಕಂಡಿದ್ದು ಕುಟುಂಬಸ್ಥರನ್ನು ತೀವ್ರ ಶೋಕಕ್ಕೀಡು ಮಾಡಿದೆ.
A 32-year-old man from Ullal, Muhammad Mazin, tragically passed away following a cosmetic surgery procedure at the "Flount" Hair Transplant Clinic in Kankanadi. The family has accused the clinic of negligence, claiming that errors during the surgery led to his death.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm