ಬ್ರೇಕಿಂಗ್ ನ್ಯೂಸ್
25-09-24 01:21 pm Mangalore Correspondent ಕರಾವಳಿ
ಮಂಗಳೂರು, ಸೆ.25: ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಕಾಸ್ಮೆಟಿಕ್ ಸರ್ಜರಿ ಮಾಡಲು ಹೋಗಿದ್ದ ಯುವಕನೊಬ್ಬ ವೈದ್ಯರ ಎಡವಟ್ಟಿನಿಂದ ದುರಂತ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಉಳ್ಳಾಲದ ಅಕ್ಕರಕೆರೆ ನಿವಾಸಿ ಮೊಹ್ಮದ್ ಮಾಝಿನ್(32) ಮೃತರು. ಮೊಹ್ಮದ್ ಮಾಝಿನ್ ತನ್ನ ಎದೆಯ ಎಡಭಾಗದಲ್ಲಿದ್ದ ಸಣ್ಣ ಗುಳ್ಳೆಯನ್ನು ತೆಗೆಸಲು ಕಂಕನಾಡಿ ಬೆಂದೂರ್ ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ಗೆ ಬಂದಿದ್ದ. ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು.
ಸರ್ಜರಿಗೆ ಮುಂದಾದ ವೈದ್ಯರು ಮಾಝಿನ್ ಅವರನ್ನು ಕ್ಲಿನಿಕ್ ನಲ್ಲಿ ದಾಖಲು ಮಾಡಿಕೊಂಡಿದ್ದರು. ಬೆಳಗ್ಗೆ ಬಂದವರು ಸಂಜೆಯಾದರೂ ಸರ್ಜರಿ ಮುಗಿದಿರಲಿಲ್ಲ. ಹೊರಗೆ ನಿಂತಿದ್ದ ತಾಯಿ ಮತ್ತು ಪತ್ನಿ ಸಂಶಯಗೊಂಡು ವಿಚಾರಿಸಿದ್ದಾರೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೇ ಮಾಝೀನ್ ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಜರಿ ಸಂದರ್ಭದಲ್ಲಿ ಅನಸ್ತೇಶಿಯಾ ಕೊಟ್ಟದ್ದು ಓವರ್ ಡೋಸ್ ಆಗಿದೆ ಎನ್ನಲಾಗುತ್ತಿದ್ದು ಅದೇ ಕಾರಣದಿಂದ ಶಸ್ತ್ರಚಿಕಿತ್ಸೆ ಬಳಿಕ ದೇಹ ಸ್ಥಿರತೆಗೆ ಬಂದಿರಲಿಲ್ಲ.
ಮಾಝಿನ್ ಎರಡು ವರ್ಷದ ಹಿಂದೆ ಮದುವೆಯಾಗಿದ್ದು ಮಕ್ಕಳಾಗಿರಲಿಲ್ಲ. ಈತನ ಅಣ್ಣನೂ ನಾಲ್ಕು ವರ್ಷಗಳ ಹಿಂದೆ ಅಕಾಲಿಕ ಸಾವು ಕಂಡಿದ್ದರು. ಇವರ ಹೆತ್ತವರಿಗೆ ಇಬ್ಬರೇ ಪುತ್ರರಾಗಿದ್ದು ಇಬ್ಬರೂ ದುರಂತ ಸಾವು ಕಂಡಿದ್ದು ಕುಟುಂಬಸ್ಥರನ್ನು ತೀವ್ರ ಶೋಕಕ್ಕೀಡು ಮಾಡಿದೆ.
A 32-year-old man from Ullal, Muhammad Mazin, tragically passed away following a cosmetic surgery procedure at the "Flount" Hair Transplant Clinic in Kankanadi. The family has accused the clinic of negligence, claiming that errors during the surgery led to his death.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am