ಬ್ರೇಕಿಂಗ್ ನ್ಯೂಸ್
25-09-24 01:21 pm Mangalore Correspondent ಕರಾವಳಿ
ಮಂಗಳೂರು, ಸೆ.25: ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಕಾಸ್ಮೆಟಿಕ್ ಸರ್ಜರಿ ಮಾಡಲು ಹೋಗಿದ್ದ ಯುವಕನೊಬ್ಬ ವೈದ್ಯರ ಎಡವಟ್ಟಿನಿಂದ ದುರಂತ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಉಳ್ಳಾಲದ ಅಕ್ಕರಕೆರೆ ನಿವಾಸಿ ಮೊಹ್ಮದ್ ಮಾಝಿನ್(32) ಮೃತರು. ಮೊಹ್ಮದ್ ಮಾಝಿನ್ ತನ್ನ ಎದೆಯ ಎಡಭಾಗದಲ್ಲಿದ್ದ ಸಣ್ಣ ಗುಳ್ಳೆಯನ್ನು ತೆಗೆಸಲು ಕಂಕನಾಡಿ ಬೆಂದೂರ್ ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ಗೆ ಬಂದಿದ್ದ. ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು.
ಸರ್ಜರಿಗೆ ಮುಂದಾದ ವೈದ್ಯರು ಮಾಝಿನ್ ಅವರನ್ನು ಕ್ಲಿನಿಕ್ ನಲ್ಲಿ ದಾಖಲು ಮಾಡಿಕೊಂಡಿದ್ದರು. ಬೆಳಗ್ಗೆ ಬಂದವರು ಸಂಜೆಯಾದರೂ ಸರ್ಜರಿ ಮುಗಿದಿರಲಿಲ್ಲ. ಹೊರಗೆ ನಿಂತಿದ್ದ ತಾಯಿ ಮತ್ತು ಪತ್ನಿ ಸಂಶಯಗೊಂಡು ವಿಚಾರಿಸಿದ್ದಾರೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೇ ಮಾಝೀನ್ ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಜರಿ ಸಂದರ್ಭದಲ್ಲಿ ಅನಸ್ತೇಶಿಯಾ ಕೊಟ್ಟದ್ದು ಓವರ್ ಡೋಸ್ ಆಗಿದೆ ಎನ್ನಲಾಗುತ್ತಿದ್ದು ಅದೇ ಕಾರಣದಿಂದ ಶಸ್ತ್ರಚಿಕಿತ್ಸೆ ಬಳಿಕ ದೇಹ ಸ್ಥಿರತೆಗೆ ಬಂದಿರಲಿಲ್ಲ.
ಮಾಝಿನ್ ಎರಡು ವರ್ಷದ ಹಿಂದೆ ಮದುವೆಯಾಗಿದ್ದು ಮಕ್ಕಳಾಗಿರಲಿಲ್ಲ. ಈತನ ಅಣ್ಣನೂ ನಾಲ್ಕು ವರ್ಷಗಳ ಹಿಂದೆ ಅಕಾಲಿಕ ಸಾವು ಕಂಡಿದ್ದರು. ಇವರ ಹೆತ್ತವರಿಗೆ ಇಬ್ಬರೇ ಪುತ್ರರಾಗಿದ್ದು ಇಬ್ಬರೂ ದುರಂತ ಸಾವು ಕಂಡಿದ್ದು ಕುಟುಂಬಸ್ಥರನ್ನು ತೀವ್ರ ಶೋಕಕ್ಕೀಡು ಮಾಡಿದೆ.
A 32-year-old man from Ullal, Muhammad Mazin, tragically passed away following a cosmetic surgery procedure at the "Flount" Hair Transplant Clinic in Kankanadi. The family has accused the clinic of negligence, claiming that errors during the surgery led to his death.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm