ಬ್ರೇಕಿಂಗ್ ನ್ಯೂಸ್
10-12-20 03:25 pm Mangalore Correspondent ಕರಾವಳಿ
ಮಂಗಳೂರು, ಡಿ.10: ಗೋವು ಕೃಷಿಕರ ಪಾಲಿಗೆ ಜೀವನಾಡಿ. ಅಂಥ ಗೋವಿನ ರಕ್ಷಣೆಗಾಗಿ ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಸಿದ್ದರಾಮಯ್ಯ ಜಾತ್ಯತೀತ ನೆಪದಲ್ಲಿ ತುಷ್ಟೀಕರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಕೃಷಿಕನ ಬದುಕಿನ ಪರವಾಗಿ ನಾವು ಕಾನೂನು ತಂದಿದ್ದೇವೆ. ಇದನ್ನು ವಿರೋಧಿಸುವುದಾದ್ರೆ ಸಿದ್ದರಾಮಯ್ಯ ಕೃಷಿಕರ ವಿರುದ್ಧ ಇದ್ದಾರೆ ಅಂತ ಆಗಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನಡೆಸಲಾಯಿತು. ಗೋವಿಗೆ ನಳಿನ್ ಕುಮಾರ್ ಪೂಜೆ ನೆರವೇರಿಸಿದರು.



ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ನಳಿನ್ ಕುಮಾರ್, ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷ ಸ್ಥಾನವಿದೆ. ಪ್ರತಿ ಮನೆಯಲ್ಲಿ ಗೋವುಗಳಿದ್ದವು. ಅದನ್ನು ಭಾರತೀಯರೆಲ್ಲ ಪೂಜಿಸುತ್ತಿದ್ದರು. ದೇವತೆಯ ಸ್ಥಾನದಲ್ಲಿರುವ ಗೋವನ್ನು ರಕ್ಷಿಸಲು ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಕಾನೂನು ತರುತ್ತೇವೆಂದು ಮೊದಲಿಂದಲೂ ಹೇಳಿಕೊಂಡು ಬರಲಾಗಿತ್ತು. ಯಡಿಯೂರಪ್ಪ ಈಗ ಮಾತು ಈಡೇರಿಸಿದ್ದಾರೆ. ಇದಕ್ಕಾಗಿ ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತೇನೆ ಎಂದರು.
ಸಿದ್ದರಾಮಯ್ಯ ಚರ್ಚೆ ಮಾಡಬೇಕಿತ್ತು ಎನ್ನಲು ಈ ಹಿಂದೆ ಮಸೂದೆ ತರುವಾಗ ಕಾಂಗ್ರೆಸ್ ಚರ್ಚೆ ಮಾಡಿತ್ತಾ..? ನಾವು ಸದನ ಸಮಿತಿಯಲ್ಲಿಟ್ಟು ಅನುಮೋದನೆ ಪಡೆದಿದ್ದೇವೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೋಹತ್ಯೆಯ ಪರವಾಗಿದೆ. ಆದ್ದರಿಂದ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
Video:
The Karnataka government on Wednesday passed a law to ban the slaughter of all kinds of cattle in the state, The Mangalore BJP leaders offered special puja to cows near BJP office in Mangalore.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm