ಬ್ರೇಕಿಂಗ್ ನ್ಯೂಸ್
26-09-24 07:36 pm Mangalore Correspondent ಕರಾವಳಿ
ಮಂಗಳೂರು, ಸೆ.26: ಹೈಕೋರ್ಟ್ ತೀರ್ಪು ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ. ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡುವ ಅಗತ್ಯವೂ ಇಲ್ಲ. ಇಡೀ ರಾಜ್ಯ ಕಾಂಗ್ರೆಸ್ ಸಿದ್ದರಾಮಯ್ಯ ಅವರ ಜತೆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಂಜುನಾಥ ಭಂಡಾರಿ, ಸಿಎಂ ರಾಜೀನಾಮೆ ವಿಚಾರದಲ್ಲಿ ಬಿಜೆಪಿಗೊಂದು ನ್ಯಾಯ, ಕಾಂಗ್ರೆಸ್ಗೊಂದು ನ್ಯಾಯವೇ ಎಂದು ಪ್ರಶ್ನಿಸಿದರು. 2010ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಚೆಕ್ನಲ್ಲಿ ಲಂಚ ಸ್ವೀಕಾರ ಮತ್ತು ಎರಡು ಡಿನೋಟಿಫಿಕೇಶನ್ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದರು. 2011ರಲ್ಲಿ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾದರೂ ಯಡಿಯೂರಪ್ಪ ರಾಜೀನಾಮೆ ನೀಡಿರಲಿಲ್ಲ. ಲೋಕಾಯುಕ್ತ ತನಿಖೆಯ ಬಳಿಕ ತಪ್ಪಿತಸ್ಥ ಎಂದು ಘೋಷಿಸಿದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಡಿಯೂರಪ್ಪ ಅವರು ಚೆಕ್ ಮೂಲಕ ಹಣ ಪಡೆದಿದ್ದರೆ, ಸಿದ್ದರಾಮಯ್ಯ ಅವರು ಮೂಡಾ ಪ್ರಕರಣದಲ್ಲಿ ನೇರವಾಗಿ ಭಾಗಿಯೇ ಆಗಿಲ್ಲ. ಕೇವಲ ರಾಜಕೀಯ ಕಾರಣಕ್ಕೆ ಆರೋಪ ಮಾಡಿದ ಮಾತ್ರಕ್ಕೆ ರಾಜೀನಾಮೆ ನೀಡುವ ಅಗತ್ಯ ಬರಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್ಗೆ ಹೈಕೋರ್ಟ್ ಅನುಮತಿ ನೀಡಿದೆ. ಇದರ ವಿರುದ್ಧ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಜೊತೆ ರಾಜ್ಯದ ಜನತೆ, ಇಡೀ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ. ಸಿದ್ದರಾಮಯ್ಯ ಮೇಲೆ ಕಳಂಕ ತರುವ ಪ್ರಯತ್ನದಲ್ಲಿ ಬಿಜೆಪಿಗರು ಸಫಲರಾಗಲ್ಲ. ಎಷ್ಟೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿಜೆಪಿಗೆ ರಾಜೀನಾಮೆ ಕೇಳುವ ನೈತಿಕ ಹಕ್ಕೇ ಇಲ್ಲ ಎಂದರು.
ದೋಸ್ತಿಗಳ ಷಡ್ಯಂತ್ರ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಸಿದ್ದರಾಮಯ್ಯ ಜೀವನದಲ್ಲಿ ಭ್ರಷ್ಟಾಚಾರದ ಯಾವುದೇ ಕಪ್ಪು ಚುಕ್ಕೆ ಹೊಂದಿಲ್ಲ. ಈಗ ಆರೋಪ ಮಾಡುತ್ತಿರುವುದು ಬಿಜೆಪಿ, ಜೆಡಿಎಸ್ ದೋಸ್ತಿಗಳ ಷಡ್ಯಂತ್ರ. ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟದ್ದು ಯಾವುದೇ ತನಿಖಾ ಸಂಸ್ಥೆಯಾಗಲೀ, ಪೊಲೀಸರಾಗಲೀ ಅಲ್ಲ. ಬದಲಾಗಿ ಮೂವರು ಖಾಸಗಿ ವ್ಯಕ್ತಿಗಳು. ಅದರಲ್ಲಿ ಇಬ್ಬರು ಬ್ಲ್ಯಾಕ್ ಮೇಲ್ ಮಾಡುವವರಾಗಿದ್ದರೆ, ಒಬ್ಬರು ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡವರು. ಇಂಥವರ ದೂರಿನ ಆಧಾರದಲ್ಲಿ ಕ್ರಮ ಕೈಗೊಳ್ಳುವುದು ಎಷ್ಟು ಸರಿ? ಬಿಜೆಪಿಯಲ್ಲಿ ಬಹುತೇಕರು ಒಂದಲ್ಲ ಒಂದು ಕೇಸ್ನಲ್ಲಿ ಇರುವವರು. ಆರೋಪ ಮಾಡಲು ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಮುಖಂಡರಾದ ಪದ್ಮರಾಜ್ ಆರ್., ಶಾಲೆಟ್ ಪಿಂಟೊ, ಶುಭೋದಯ ಆಳ್ವ, ಮನೋರಾಜ್ ರಾಜೀವ, ಟಿ.ಕೆ. ಸುಧೀರ್, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ ಮತ್ತಿತರರಿದ್ದರು.
Bjp Patty filled with corruption has no right to demand resignation of CM Siddaramaiah says Manjunath bhandary in Mangalore.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm