ಬ್ರೇಕಿಂಗ್ ನ್ಯೂಸ್
26-09-24 10:49 pm Mangalore Correspondent ಕರಾವಳಿ
ಮಂಗಳೂರು, ಸೆ.26: ಅಮಾಯಕ ಯುವಕನ ಸಾವಿಗೆ ಕಾರಣವಾದ ನಗರದ ಕಂಕನಾಡಿಯ ಫ್ಲಾಂಟ್ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸೀಲ್ ಮಾಡಿದ್ದಾರೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆಯಂತೆ, ಜಿಲ್ಲಾ ಆರೋಗ್ಯಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಕಾಸ್ಮೆಟಿಕ್ ಕ್ಲಿನಿಕನ್ನು ಬೀಗ ಜಡಿದು ಬಂದ್ ಮಾಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವಾಗಿದೆ ಎಂಬ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದು, ತನಿಖೆಗೆ ಆರಂಭಿಸಿದ್ದಾರೆ. ಸರಿಯಾದ ವ್ಯವಸ್ಥೆ ಇಲ್ಲದೆ ಅನಸ್ತೇಶಿಯಾ ಕೊಟ್ಟಿದ್ದರಿಂದ ಉಳ್ಳಾಲದ ಯುವಕ ಮಹಮ್ಮದ್ ಮಾಝಿನ್ ಸಾವಾಗಿತ್ತು ಎಂದು ಕುಟುಂಬಸ್ಥರು ಕದ್ರಿ ಠಾಣೆಗೆ ದೂರು ನೀಡಿದ್ದರು.
ಡಿಎಚ್ಓ ಡಾ.ಎಚ್.ಆರ್ ತಿಮ್ಮಯ್ಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಕ್ಲಿನಿಕ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಿದೆ. ಪ್ರಕರಣದ ತನಿಖೆಗೆ ತಜ್ಞರ ಕಮಿಟಿಯನ್ನು ನೇಮಕ ಮಾಡಲಾಗಿದ್ದು ಸಮಿತಿ ತನಿಖಾ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಉಳ್ಳಾಲದ ಯುವಕ ಕಾಸ್ಮೆಟಿಕ್ ಕ್ಲಿನಿಕ್ ಗೆ ಬಂದಿದ್ದ ಸಂದರ್ಭದಲ್ಲಿ ಅಲ್ಲಿನ ವೈದ್ಯರು ಸರ್ಜರಿಗೆ ಮುಂದಾಗಿದ್ದರು. ಆದರೆ, ವೈದ್ಯರ ಎಡವಟ್ಟಿನಿಂದಾಗಿ ಯುವಕ ಸಾವನ್ನಪ್ಪಿದ್ದ.
The health department temporarily locked a Flaunt Hair Transplant cosmetic surgery clinic in the city in connection with the death of a youth who visited the clinic for cosmetic surgery and died soon after the surgery.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm