ಬ್ರೇಕಿಂಗ್ ನ್ಯೂಸ್
27-09-24 03:25 pm Mangalore Correspondent ಕರಾವಳಿ
ಮಂಗಳೂರು, ಸೆ.27: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಕರಣಿಕರು ಕೆಲಸದ ಒತ್ತಡ ಮತ್ತು ಮೊಬೈಲ್ ಏಪ್ ಗಳಿಂದಾಗುವ ಸಮಸ್ಯೆಯಿಂದ ಬೇಸತ್ತು ಮಂಗಳೂರಿನಲ್ಲಿ ಅನಿರ್ದಿಷ್ಟ ಧರಣಿ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಬಂದಿರುವ 150ಕ್ಕೂ ಹೆಚ್ಚು ಗ್ರಾಮ ಕರಣಿಕರು ಮಂಗಳೂರಿನ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಗ್ರಾಮ ಕರಣಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಪೂಜಾರಿ, ನಮ್ಮ ಜಿಲ್ಲೆಯಲ್ಲಿ ಒಟ್ಟು 325 ಗ್ರಾಮ ಕರಣಿಕರ ಹುದ್ದೆಗಳಿದ್ದರೂ, 90 ಹುದ್ದೆಗಳು ಖಾಲಿಯಿದ್ದು ಅದರ ಹೊಣೆಭಾರವನ್ನು ಉಳಿದವರ ಮೇಲೆ ಹೊರಿಸಿದ್ದಾರೆ. ಇದಲ್ಲದೆ, 20ಕ್ಕೂ ಹೆಚ್ಚು ಮೊಬೈಲ್ ಏಪ್ ಗಳನ್ನು ಬಳಸಿ ತಂತ್ರಜ್ಞಾನ ಆಧರಿತವಾಗಿ ಕೆಲಸ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಶನಿವಾರ, ಭಾನುವಾರವೂ ರಜೆ ಇಲ್ಲದೆ ಕೆಲಸ ಮಾಡುವ ಸ್ಥಿತಿಯಾಗಿದೆ. 238 ಮಂದಿಯಲ್ಲಿ ನೂರಕ್ಕೂ ಹೆಚ್ಚು ಮಂದಿ ತಾಲೂಕು ಕಚೇರಿ, ಡೀಸಿ ಕಚೇರಿಯಲ್ಲಿದ್ದಾರೆ. ಈಗ 138 ಸಿಬಂದಿ 422 ಗ್ರಾಮಗಳ ಹೊಣೆ ಭಾರ ಹೊತ್ತು ಕೆಲಸ ಮಾಡಬೇಕಾಗಿದೆ. ಇದರ ಬಗ್ಗೆ ಸರಕಾರದ ಗಮನ ಸೆಳೆಯುವುದಕ್ಕಾಗಿ ಧರಣಿ ಕುಳಿತಿದ್ದೇವೆ ಎಂದರು.



ಧರಣಿಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಸಿಬಂದಿಯೂ ಕೈಜೋಡಿಸಿದ್ದಾರೆ. 2019ರಿಂದ ಗ್ರಾಮ ಕರಣಿಕರ ಹುದ್ದೆಗೆ ನೇಮಕಾತಿ ಆಗಿಲ್ಲ. ಹೀಗಾಗಿ ನಮ್ಮ ಮೇಲೆ ವಿಪರೀತ ಹೊಣೆ ಭಾರ ಹೊರಿಸಿದ್ದಾರೆ. ಕಂದಾಯ ಇಲಾಖೆಯ ಪ್ರತಿ ಕೆಲಸಕ್ಕೂ ವಿಎಗಳನ್ನು ಹೊಣೆಯಾಗಿಸಿ ಒತ್ತಡ ಹೇರುತ್ತಿದ್ದಾರೆ. ನಾವು ವೈಯಕ್ತಿಕ ಜೀವನವೇ ಇಲ್ಲದೆ ಕೆಲಸ ಮಾಡುವ ಸ್ಥಿತಿಯಾಗಿದೆ ಎಂದು ಉಷಾ ಎಂಬವರು ಅಲವತ್ತುಕೊಂಡರು. ಧರಣಿಯಲ್ಲಿ ಗ್ರಾಮ ಕರಣಿಕರ ಸಂಘದ ಜಿಲ್ಲಾಧ್ಯಕ್ಷ ಸಂತೋಷ್, ಉಪಾಧ್ಯಕ್ಷ ಪ್ರದೀಪ್ ಕುಮಾರ್, ಅವಿನಾಶ್ ಬಿಲ್ಲವ, ಪುತ್ತೂರು ವಿಭಾಗ ಮಟ್ಟದ ಉಪಾಧ್ಯಕ್ಷೆ ಅಶ್ವಿನಿ, ಉಮೇಶ್ ಕಾವಡಿ, ಪ್ರಸನ್ನ ಪಕಳ, ತೌಫೀಕ್, ಶಿವರಾಜ್ ಗಾಯಕವಾಡ್, ಪ್ರದೀಪ್ ಶೆಣೈ ಮತ್ತಿತರರು ಇದ್ದರು.
Mobile app issues at office and work load, Mangalore village accountants hold protest in city.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am