ಬ್ರೇಕಿಂಗ್ ನ್ಯೂಸ್
31-07-20 07:36 am Mangalore Correspondant ಕರಾವಳಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 198 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದೇವೇಳೆ ಬುಧವಾರ ಮತ್ತು ಗುರುವಾರ ಮೃತಪಟ್ಟ ಎಂಟು ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಕೋವಿಡ್ ದೃಢಪಟ್ಟ 27 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, 80 ಮಂದಿಗೆ ಇನ್ಫ್ಲೂಯೆನ್ಜ್ ಲೈಕ್ ಇಲ್ನೆಸ್, 14 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ, ನಾಲ್ವರಿಗೆ ಅಂತಾರಾಷ್ಟ್ರೀಯ ಪ್ರಯಾಣದಿಂದ ಸೋಂಕು ತಗಲಿದೆ. 73 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಕೋವಿಡ್ ಮುಕ್ತರಾಗಿ 105 ಮಂದಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ 5,509 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 2,561 ಮಂದಿ ಗುಣಮುಖರಾಗಿದ್ದಾರೆ. 2,800 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಮೃತಪಟ್ಟ ಎಂಟು ಮಂದಿಯ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಗುರುವಾರ ಸ್ವೀಕೃತವಾಗಿದ್ದು, ಎಲ್ಲರಿಗೂ ಕೋವಿಡ್ ಇರುವುದು ದೃಢಪಟ್ಟಿದೆ. ಎಲ್ಲ ಮರಣಗಳ ಕಾರಣ ನಿರ್ಧರಿಸಲು ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ಸ್ವೀಕೃತವಾಗಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಮೃತ ವ್ಯಕ್ತಿಗಳಲ್ಲಿ ಕೋವಿಡ್ ಸೋಂಕು ಪತ್ತೆ
– ಪುತ್ತೂರಿನ 36ರ ಮಹಿಳೆ ಜು. 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ಸೆಪ್ಟಿಕ್ ಶಾಕ್, ರೇನಲ್ ಫೈಲ್ಯೂರ್ನಿಂದ ಬಳಲುತ್ತಿದ್ದರು.
-ಮಂಗಳೂರಿನ 60ರ ಮಹಿಳೆ ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ರೆಸ್ಪಿರೇಟರಿ ಫೈಲ್ಯೂರ್ನಿಂದ ಬಳಲುತ್ತಿದ್ದರು.
– ದಾವಣಗೆರೆ ಮೂಲದ 60ರ ಮಹಿಳೆ ಜು. 23ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಕ್ಯೂಟ್ ರೆಸ್ಪಿರೇಟರಿ ಇನ್ಫೆಕ್ಷನ್, ಡಯಾಬಿಟಿಸ್, ಹೈಪರ್ಟೆನ್ಷನ್ನಿಂದ ಬಳಲುತ್ತಿದ್ದರು.
– ಮಂಗಳೂರಿನ 57ರ ವ್ಯಕ್ತಿ ಜು. 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ 29ರಂದು ಮೃತಪಟ್ಟಿದ್ದಾರೆ. ಅವರು ಅಸ್ತಮಾ, ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದರು.
– ಮೈಸೂರಿನ 75ರ ವೃದ್ಧ ಜು. 26ರಂದು ವೆನಾÉಕ್ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಸ್ತಮಾ, ಅಧಿಕ ರಕ್ತದೊತ್ತಡ, ನ್ಯುಮೋನಿಯಾದಿಂದ ಬಳಲುತ್ತಿದ್ದರು.
– ಪುತ್ತೂರಿನ 64ರ ವ್ಯಕ್ತಿ ಜು. 22ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾದಿಂದ ಬಳಲುತ್ತಿದ್ದರು.
– ಮಂಗಳೂರಿನ 52 ವರ್ಷದ ವ್ಯಕ್ತಿ ಜು. 28ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಕ್ಯುಟ್ ಕೊರೊನರಿ ಈವೆಂಟ್ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದರು.
– ಮಂಗಳೂರಿನ 87ರ ವೃದ್ಧೆ ಜು. 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm