ಬ್ರೇಕಿಂಗ್ ನ್ಯೂಸ್
31-07-20 07:36 am Mangalore Correspondant ಕರಾವಳಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 198 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದೇವೇಳೆ ಬುಧವಾರ ಮತ್ತು ಗುರುವಾರ ಮೃತಪಟ್ಟ ಎಂಟು ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಕೋವಿಡ್ ದೃಢಪಟ್ಟ 27 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, 80 ಮಂದಿಗೆ ಇನ್ಫ್ಲೂಯೆನ್ಜ್ ಲೈಕ್ ಇಲ್ನೆಸ್, 14 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ, ನಾಲ್ವರಿಗೆ ಅಂತಾರಾಷ್ಟ್ರೀಯ ಪ್ರಯಾಣದಿಂದ ಸೋಂಕು ತಗಲಿದೆ. 73 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಕೋವಿಡ್ ಮುಕ್ತರಾಗಿ 105 ಮಂದಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ 5,509 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 2,561 ಮಂದಿ ಗುಣಮುಖರಾಗಿದ್ದಾರೆ. 2,800 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಮೃತಪಟ್ಟ ಎಂಟು ಮಂದಿಯ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಗುರುವಾರ ಸ್ವೀಕೃತವಾಗಿದ್ದು, ಎಲ್ಲರಿಗೂ ಕೋವಿಡ್ ಇರುವುದು ದೃಢಪಟ್ಟಿದೆ. ಎಲ್ಲ ಮರಣಗಳ ಕಾರಣ ನಿರ್ಧರಿಸಲು ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ಸ್ವೀಕೃತವಾಗಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಮೃತ ವ್ಯಕ್ತಿಗಳಲ್ಲಿ ಕೋವಿಡ್ ಸೋಂಕು ಪತ್ತೆ
– ಪುತ್ತೂರಿನ 36ರ ಮಹಿಳೆ ಜು. 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ಸೆಪ್ಟಿಕ್ ಶಾಕ್, ರೇನಲ್ ಫೈಲ್ಯೂರ್ನಿಂದ ಬಳಲುತ್ತಿದ್ದರು.
-ಮಂಗಳೂರಿನ 60ರ ಮಹಿಳೆ ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ರೆಸ್ಪಿರೇಟರಿ ಫೈಲ್ಯೂರ್ನಿಂದ ಬಳಲುತ್ತಿದ್ದರು.
– ದಾವಣಗೆರೆ ಮೂಲದ 60ರ ಮಹಿಳೆ ಜು. 23ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಕ್ಯೂಟ್ ರೆಸ್ಪಿರೇಟರಿ ಇನ್ಫೆಕ್ಷನ್, ಡಯಾಬಿಟಿಸ್, ಹೈಪರ್ಟೆನ್ಷನ್ನಿಂದ ಬಳಲುತ್ತಿದ್ದರು.
– ಮಂಗಳೂರಿನ 57ರ ವ್ಯಕ್ತಿ ಜು. 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ 29ರಂದು ಮೃತಪಟ್ಟಿದ್ದಾರೆ. ಅವರು ಅಸ್ತಮಾ, ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದರು.
– ಮೈಸೂರಿನ 75ರ ವೃದ್ಧ ಜು. 26ರಂದು ವೆನಾÉಕ್ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಸ್ತಮಾ, ಅಧಿಕ ರಕ್ತದೊತ್ತಡ, ನ್ಯುಮೋನಿಯಾದಿಂದ ಬಳಲುತ್ತಿದ್ದರು.
– ಪುತ್ತೂರಿನ 64ರ ವ್ಯಕ್ತಿ ಜು. 22ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾದಿಂದ ಬಳಲುತ್ತಿದ್ದರು.
– ಮಂಗಳೂರಿನ 52 ವರ್ಷದ ವ್ಯಕ್ತಿ ಜು. 28ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಕ್ಯುಟ್ ಕೊರೊನರಿ ಈವೆಂಟ್ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದರು.
– ಮಂಗಳೂರಿನ 87ರ ವೃದ್ಧೆ ಜು. 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm