ಬ್ರೇಕಿಂಗ್ ನ್ಯೂಸ್
28-09-24 02:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.









ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ ಎನ್ನಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜು ಸಮೀಪದಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯು ಕಾರು ಇದೇ ರೀತಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿತ್ತು.
Bmw car cathes fire near Adyar sahyadri college in Mangalore, video goes viral. Gurudeep who was taking the car to BMW service centre near Adyar suddenly saw the fire coming out of the engine. No casualties have been reported
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm