ಬ್ರೇಕಿಂಗ್ ನ್ಯೂಸ್
28-09-24 02:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.









ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ ಎನ್ನಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜು ಸಮೀಪದಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯು ಕಾರು ಇದೇ ರೀತಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿತ್ತು.
Bmw car cathes fire near Adyar sahyadri college in Mangalore, video goes viral. Gurudeep who was taking the car to BMW service centre near Adyar suddenly saw the fire coming out of the engine. No casualties have been reported
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am