ಬ್ರೇಕಿಂಗ್ ನ್ಯೂಸ್
29-09-24 05:33 pm Mangalore Correspondent ಕರಾವಳಿ
ಮಂಗಳೂರು, ಸೆ.29: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದ್ವೀಪದ ಜಮೀನಿನ ವಾಸ್ತವ ವಿಸ್ತೀರ್ಣ ಅರಿಯಲು ಅಧಿಕೃತ ಸರ್ವೆ ನಡೆಸಲು ಸ್ಪೀಕರ್ ಯು.ಟಿ.ಖಾದರ್ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ Satellite images ಅನ್ನು Google Engine Portal ಮೂಲಕ ತೆಗೆಯಬೇಕು ಮತ್ತು ಅಧಿಕೃತ ಸರ್ವೆಯರ್ ಮೂಲಕ ಸರ್ವೆ ನಡೆಸಬೇಕು. ಕಂದಾಯ ಇಲಾಖೆಯ ಅಧಿಕೃತ ದಾಖಲೆ ಪ್ರಕಾರ ಈ ಹಿಂದೆ ದ್ವೀಪದ ಮೂಲ ವಿಸ್ತೀರ್ಣ ಎಷ್ಟಿತ್ತು ಮತ್ತು ಈಗ ಎಷ್ಟಿದೆ? ವಿಸ್ತೀರ್ಣದಲ್ಲಿ ಕೊರತೆ ಕಂಡು ಬಂದಿದ್ದರೆ ಅದಕ್ಕೆ ಕಾರಣ ಏನು? ಎಂಬುದರ ಬಗ್ಗೆ ಸರ್ವೆ ನಡೆಸಿ ವರದಿ ನೀಡುವಂತೆ ಖಾದರ್ ನಿರ್ದೇಶನ ನೀಡಿದ್ದಾರೆ.
ಈಗಾಗಲೇ ಈ ಭಾಗದ ಜನರು ಅಕ್ರಮ ಮರಳುಗಾರಿಕೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಅದರಂತೆ ಅಕ್ರಮ ಮರಳುಗಾರಿಕೆ ತಡೆಯಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ. ಅಧಿಕೃತ ಸರ್ವೆ ನಡೆಸಿದ ಬಳಿಕ ವಾಸ್ತವ ತಿಳಿಯಲಿದೆ. ಮರಳುಗಾರಿಕೆಯಿಂದ ದ್ವೀಪದ ವಿಸ್ತೀರ್ಣದಲ್ಲಿ ಕಡಿಮೆ ಕಂಡುಬಂದಿದ್ದರೆ ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ದ್ವೀಪದ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಸ್ಪೀಕರ್ ನಿರ್ದೇಶನದ ಮೇರೆಗೆ ಈಗಾಗಲೇ ಜಿಲ್ಲಾಧಿಕಾರಿ ಅವರು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು, ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಪೊಲೀಸ್ ಉಪಾಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಹಿತ 6 ಮಂದಿಯ ತನಿಖಾ ಸಮಿತಿಯನ್ನು ರಚಿಸಿದ್ದಾರೆ.
Mangalore Speaker Khader orders survey of Pavoor uliya Island, Action against illegal miniers. Meanwhile, Deputy Commissioner M.P. Mullai Muhilan in his September 17 order directed officials of the revenue, police, and mines and geology department to initiate strict action, including seizing of boats and vehicles, if they were found to be engaged in illegal sand extraction in the CRZ area of the Netravathi.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm