ಬ್ರೇಕಿಂಗ್ ನ್ಯೂಸ್
01-10-24 03:26 pm Mangalore Correspondent ಕರಾವಳಿ
ಮಂಗಳೂರು, ಅ.1: ಹಿರಿಯ ನಾಗರಿಕರ ದಿನಾಚರಣೆಯ ದಿನದಂದೇ ನಿವೃತ್ತ ಸರಕಾರಿ ನೌಕರರನ್ನು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ನಾವೇನೂ ಸಾಲ ಕೇಳ್ತಾ ಇಲ್ಲ. ಸುದೀರ್ಘ ವರ್ಷ ಸರಕಾರಿ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎನ್ನುವುದು ನಮ್ಮ ಕಳಕಳಿ ಎಂದು ನಿವೃತ್ತ ಸರಕಾರಿ ನೌಕರರ ವೇದಿಕೆಯ ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.
ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂಭಾಗದಲ್ಲಿ ವೇದಿಕೆಯ ವತಿಯಿಂದ ಏರ್ಪಡಿಸಲಾದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. 2022ರ ಜುಲೈ1ರಿಂದ 2024ರ ಜುಲೈ1ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಈ ಬಗ್ಗೆ ಪರಿಷ್ಕೃತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಿದರು.


ರಾಜ್ಯವ್ಯಾಪಿ ಪ್ರತಿಭಟನೆ, ಸತ್ಯಾಗ್ರಹ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನಸೌಧ ತನಕ ಪಾದಯಾತ್ರೆ ನಡೆಸುತ್ತೇವೆ. ಸರಕಾರ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.
ಕೋವಿಡ್ ಸಮಯದಲ್ಲಿ ತುರ್ತು ಸೇವೆಗಳನ್ನು ಮಾಡಿದವರು ಸರಕಾರಿ ನೌಕರರು. ಈಗಾಗಲೇ ನಮ್ಮ ಬೇಡಿಕೆಗಳ ಬಗ್ಗೆ ತಹಸೀಲ್ದಾರ್ ಮೂಲಕ ಆರ್ಥಿಕ ಇಲಾಖೆಯ ವರೆಗೂ ಗಮನ ಸೆಳೆದಿದ್ದೇವೆ. ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯವ್ಯಾಪಿ ಇಂದು ನಿವೃತ್ತ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವ ಸ್ಥಿತಿಯಾಗಿದೆ ಎಂದು ಸಿರಿಲ್ ರಾಬರ್ಟ್ ಡಿಸೋಜ ಹೇಳಿದರು.
ಜಿಲ್ಲಾ ಸಂಚಾಲಕ ಸ್ಟ್ಯಾನಿ ತಾವ್ರೋ ಮಾತನಾಡಿ, ನಿವೃತ್ತ ಸರಕಾರಿ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವಂತಾಗಿದ್ದು ವಿಷಾದನೀಯ. ಸರಕಾರ ಇದನ್ನು ಗಂಭೀರ ಪರಿಗಣಿಸಿ ನ್ಯಾಯ ಕೊಡಬೇಕು ಎಂದರು.
ನಿವೃತ್ತ ಹಿರಿಯ ಸರಕಾರಿ ನೌಕರ ವಿಠಲ ಶೆಟ್ಟಿಗಾರ್ ಮಾತನಾಡಿ, ನಾನು ನಿವೃತ್ತನಾಗಿ ಬಹಳ ವರ್ಷ ಆಗಿದೆ. ಆದರೆ ನಿವೃತ್ತ ಸರಕಾರಿ ನೌಕರರಿಗೆ ಅನ್ಯಾಯವಾಗುತ್ತಿರುವುದನ್ನು ನೋಡಿ ಸುಮ್ಮನಿರಲು ಸಾಧ್ಯವಾಗದೇ ಪ್ರತಿಭಟನೆಗೆ ಬಂದಿದ್ದೇನೆ ಎಂದರು.
ಸಂಚಾಲಕಿ ಮಂಜುಳಾ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪ್ರತಿಭಟನೆಯ ಬಳಿಕ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿರಿಯ ಸರಕಾರಿ ನೌಕರರಾದ ವಿಜಯ ಪೈ, ಮೋಹನ ಬಂಗೇರ, ಎನ್. ಆನಂದ ನಾಯ್ಕ್, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರು ಉಪಸ್ಥಿತರಿದ್ದರು.
Retired government employees protest in Mangalore, warning of hunger strike on Senior Citizens Day.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm