ಬ್ರೇಕಿಂಗ್ ನ್ಯೂಸ್
03-10-24 05:50 pm Mangalore Correspondent ಕರಾವಳಿ
ಮಂಗಳೂರು, ಅ.3: ಮಂಗಳೂರು ದಸರಾ ಎಂದೇ ಖ್ಯಾತಿ ಎತ್ತಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಹತ್ತು ದಿನಗಳ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರು ಶಾರದಾ ಪ್ರತಿಷ್ಠೆ ಬಳಿಕ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.
ದೇವಸ್ಥಾನದ ಬಲಭಾಗದಲ್ಲಿರುವ ಬೃಹತ್ ಸಭಾಂಗಣದಲ್ಲಿ ನವದುರ್ಗೆಯರು, ಶಾರದೆ ಮತ್ತು ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆ ಆಗಿದ್ದು ಸಾವಿರಾರು ಜನರು ಸಾಕ್ಷಿಯಾಗಿದ್ದಾರೆ. ಇಂದಿನಿಂದ ಮೊದಲ್ಗೊಂಡು ನಿರಂತರವಾಗಿ ಹತ್ತು ದಿನಗಳ ಕಾಲ ಶಾರದೆ, ನವದುರ್ಗೆಯರ ಪೂಜೆ ನಡೆಯಲಿದ್ದು, ಅಭೂತಪೂರ್ವ ಅಲಂಕಾರದಲ್ಲಿ ನವದುರ್ಗೆಯರು ಶೋಭಿಸಲಿದ್ದಾರೆ.





ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಜನಾರ್ದನ ಪೂಜಾರಿ, ಮಂಗಳೂರು ದಸರಾ ಸಾಕಾರ ಆಗಿರೋದು ನನ್ನಿಂದ ಅಲ್ಲ. ಅದು ದೇವರಿಂದ ಆಗಿರೋದು. ದೇವರ ಶಕ್ತಿ ಇರೋದಕ್ಕಾಗಿ ಜನರು ಬರುತ್ತಿದ್ದಾರೆ. ನಾವು ನೀವು ಏನೂ ಅಲ್ಲ ಎಂದು ಹೇಳಿದರು. ದಸರಾ ಸಂದರ್ಭದಲ್ಲಿ ಹತ್ತು ದಿನವೂ ಖ್ಯಾತ ಕಲಾವಿದರಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ. ಅ.4ರಂದು ಬಹುಭಾಷಾ ಕವಿಗೋಷ್ಟಿ ಆಯೋಜಿಸಲಾಗಿದ್ದು ಹತ್ತು ಭಾಷೆಗಳಲ್ಲಿ ಕವನ ವಾಚನ ನಡೆಯಲಿದೆ. ಇದಲ್ಲದೆ, ಈ ಬಾರಿ ವಿಶೇಷ ಎನ್ನುವಂತೆ ಅ.6ರಂದು ಬೆಳಗ್ಗೆ 6 ಗಂಟೆಗೆ ವಾಕಥಾನ್ ಏರ್ಪಡಿಸಲಾಗಿದೆ.




ಅ.13ರಂದು 9 ಕಿಮೀ ಉದ್ದಕ್ಕೆ ಮಂಗಳೂರು ನಗರದುದ್ದಕ್ಕೂ ನವದುರ್ಗೆಯರ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಮೈಸೂರು ದಸರಾ ಉತ್ಸವ ನೆನಪಿಸುವಂತೆ ವಿಶಿಷ್ಟ ಕಳೆ ಬರಲಿದೆ. ಮೆರವಣಿಗೆಯಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಾರೆ. ವಿದೇಶಿ ಪ್ರಜೆಗಳೂ ಉತ್ಸವ ನೋಡುವುದಕ್ಕೆ ಬರುವುದು ವಿಶೇಷ.
Former union minister B Janardhana Poojary inaugurated the 10-day grand Dasara celebration at Kudroli Gokarnatheshwara Temple on Thursday, October 3. Dasara Mahotsava will be held from October 3 to October 14, featuring various cultural and spiritual programs.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm