ಬ್ರೇಕಿಂಗ್ ನ್ಯೂಸ್
06-10-24 09:22 pm Mangalore Correspondent ಕರಾವಳಿ
ಮಂಗಳೂರು, ಅ.6: ದೇಶ ಸ್ವತಂತ್ರಗೊಂಡು 75 ವರ್ಷ ಕಳೆದರೂ ಪ್ರಾಚೀನ ದೇಗುಲಗಳು ಸೇರಿದಂತೆ ಹಿಂದುಗಳ ಹೆಚ್ಚಿನ ದೇವಸ್ಥಾನಗಳು ಸರಕಾರದ ವಶದಲ್ಲೇ ಇವೆ. ಇದರಿಂದ ಹಿಂದೂಗಳ ನಂಬಿಕೆಗೆ ಧಕ್ಕೆ ಉಂಟಾಗುವ ಕೆಲಸಗಳಾಗುತ್ತಿವೆ. ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿಯಲ್ಲಿ ದೇಶದ ಎಲ್ಲ ದೇವಸ್ಥಾನಗಳಿಗೂ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿರುವ ದೇವಾಲಯಗಳನ್ನು ಹಿಂದೂಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಸೂಚನೆ ನೀಡಿದೆ. ಆದರೆ ದೇವಸ್ಥಾನಗಳನ್ನು ಸರಕಾರ ಹಿಂದುಗಳಿಗೆ ನೀಡದೆ ತನ್ನ ವಶದಲ್ಲೇ ಇರಿಸಿಕೊಂಡಿದ್ದು ಇದರಿಂದಾಗಿ ನಮ್ಮ ಶ್ರದ್ಧಾಕೇಂದ್ರಗಳಿಗೆ ಅಪಚಾರಗಳಾಗುತ್ತಿವೆ. ನ್ಯಾಯಾಲಯದ ತೀರ್ಪಿನಂತೆ ಎಲ್ಲ ಹಿಂದೂ ದೇಗುಲಗಳನ್ನು ಸರಕಾರವು ಸಮಾಜದ ವಶಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಗಳು ದೇವಸ್ಥಾನಗಳನ್ನು ವಶಕ್ಕೆ ಪಡೆದ ಬಳಿಕ ಅವನ್ನು ಸ್ವಸ್ಥ ಸ್ಥಿತಿಯಲ್ಲಿಡಬೇಕಾದ ಕರ್ತವ್ಯ ಇರುತ್ತದೆ. ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ಅಪವಿತ್ರದಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾದ್ದು ಆಯಾ ಸರ್ಕಾರಗಳ ಕರ್ತವ್ಯ. ಸಂಬಂಧಪಟ್ಟ ವಿಭಾಗಗಳು ಈ ಬಗ್ಗೆ ನಿಗಾ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದೇ ಇರಬೇಕಾದರೆ, ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾಗಬೇಕು. ತಮ್ಮದೇ ಗೋವುಗಳಿದ್ದರೆ ಶುದ್ಧ ತುಪ್ಪ, ಹಾಲು ದೊರಕುತ್ತದೆ.
ದೇವಸ್ಥಾನಗಳು ಹಿಂದುಗಳ ಜಾಗೃತ ಕೇಂದ್ರಗಳಾದಾಗ ಮಾತ್ರ ಧಾರ್ಮಿಕ ನಂಬಿಕೆ, ನಡವಳಿಕೆಯನ್ನು ಗೌರವಿಸಲು ಸಾಧ್ಯವಾಗುತ್ತದೆ. ಇಂತಹ ಉಪಕ್ರಮಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.
Despite 75 years of independence, many ancient temples, including prominent ones, remain under government control, which is damaging the faith of Hindus, according to Pejawar Matha’s Sri Vishwaprasanna Teertha Swamiji.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm