ಬ್ರೇಕಿಂಗ್ ನ್ಯೂಸ್
06-10-24 10:58 pm Udupi Correspondent ಕರಾವಳಿ
ಉಡುಪಿ, ಅ.6 : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಕಾಣಿಸಿಕೊಂಡಿದ್ದು ಇತ್ತ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಭಾನುವಾರ ಸಂಜೆ ಮೇಘಸ್ಫೋಟ ಸಂಭವಿಸಿದೆ. ಹೆಬ್ರಿ ಸಮೀಪದ ಕಬ್ಬಿನಾಲೆ ಬೆಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ಆಸುಪಾಸಿನಲ್ಲಿ ದಿಢೀರ್ ಪ್ರವಾಹ ಸ್ಥಿತಿ ಏರ್ಪಟ್ಟಿದೆ.
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟ ಉಂಟಾಗಿದೆ. ಇದರಿಂದಾಗಿ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ.





ಭೀಕರ ಜಲ ಪ್ರವಾಹದಿಂದಾಗಿ ಹಲವು ಮನೆಗಳು, ಕಾರು ಬೈಕ್ ಗಳು ಕೊಚ್ಚಿ ಹೋಗಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿದ್ದರಿಂದ ಭೀಕರ ಪ್ರವಾಹ ಸೃಷ್ಟಿಯಾಗಿದೆ ಎನ್ನಲಾಗುತ್ತಿದೆ. ಮುದ್ರಾಡಿಯ ಹೊಸ ಕಂಬ್ಲದಲ್ಲಿ 1, ಕಾಂತರಬೈಲಿನಲ್ಲಿ 4, ಕೆಲಕಿಲದಲ್ಲಿ 3 ಮನೆಗಳು ಅರ್ಧದಷ್ಟು ಮುಳುಗಿದ್ದು, ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಗ್ಗ ಕಟ್ಟಿ ಮನೆ ಮಂದಿಯನ್ನು ರಕ್ಷಿಸಿದ್ದಾರೆ.
ಮುದ್ರಾಡಿ ಆಸುಪಾಸಿನಲ್ಲಿ ಎಂಟು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ನೆರೆಯಿಂದಾಗಿ ಮುದ್ರಾಡಿ ಸಂಪರ್ಕಿಸುವ ಬಲ್ಲಾಡಿ ತುಂಡುಗುಡ್ಡೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು ಸ್ಥಳೀಯರು ಬದಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
‘ಕಬ್ಬಿನಾಲೆಯ ಬೆಟ್ಟದಲ್ಲಿ ಉಂಟಾದ ಮೇಘಸ್ಫೋಟದಿಂದ ಕೆಲವೇ ಗಂಟೆಯಲ್ಲಿ ಭಾರೀ ಮಳೆಯಾಗಿ ಜಲ ಪ್ರವಾಹ ಸೃಷ್ಠಿಯಾಗಿದೆ. ಇದರ ಪರಿಣಾಮ ನೀರು ಮನೆಗಳಿಗೆ ನುಗ್ಗಿವೆ ಎಂದು ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಗಣಪತಿ ಮುದ್ರಾಡಿ ತಿಳಿಸಿದ್ದಾರೆ.
ಇನ್ನೆರಡು ದಿನ ಭಾರೀ ಮಳೆ ಸೂಚನೆ
ಪ್ರವಾಹದ ಕುರಿತು ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, 'ಅ.9ರ ವರೆಗೆ ಇದೇ ರೀತಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಹೆಬ್ರಿ ತಾಲೂಕಿನ ಬಲ್ಲಾಡಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು, ನೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ' ಎಂದು ಹೇಳಿದ್ದಾರೆ.
Heavy rain at hebri and Udupi, houses flooded with water cars bike go missing.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am