ಬ್ರೇಕಿಂಗ್ ನ್ಯೂಸ್
08-10-24 01:18 pm Mangalore Correspondent ಕರಾವಳಿ
ಮಂಗಳೂರು, ಅ.8: ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ, ಎಸ್ಪಿ, ಡಿಸಿ ಕಚೇರಿ ಎದುರು ಧರಣಿ ನಡೆಸುದಾಗಿ ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಸಮಿತಿ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಸಮಿತಿ ಅಧ್ಯಕ್ಷ ಆಲ್ವಿನ್ ಜೆರೊಮ್ ಡಿಸೋಜ ಪಾನೀರ್ ಇವರ ಮೇಲೆ ದಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಆಸ್ಪತ್ರೆ ದಾಖಲಾಗಿದ್ದಾರೆ. ಆಲ್ವಿನ್ ಅವರು ಉಳಿಯ ಪಾವೂರು, ರಾಣಿಪುರ, ಉಳ್ಳಾಲ ಹೊಯ್ಗೆ, 62ನೇ ತೋಕೂರು ಕೆಂಜಾರು ಈ ಪ್ರದೇಶಗಳ ದ್ವೀಪಗಳನ್ನು ಉಳಿಸುವ ಉದ್ದೇಶದಿಂದ ಸೆ.27ರಂದು ನಡೆಸಿದ ಬೃಹತ್ ಪ್ರತಿಭಟನೆಯ ಫಲವಾಗಿ ಶಾಂತಿ ಪ್ರಿಯರಾದ ನಮಗೆ ಸಿಕ್ಕ ಕಾಣಿಕೆಯಂತಾಗಿದೆ.

ಪ್ರಕೃತಿಯನ್ನು ನಾಶಗೊಳಿಸುವವರ ವಿರುದ್ಧ ನಮ್ಮ ಮೇಲೆ ಇನ್ನೆಷ್ಟು ಹಲ್ಲೆ ನಡೆಸಿದರೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ. ಆಲ್ವಿನ್ ಡಿಸೋಜರವರ ಮೇಲೆ ನಡೆಸಿರುವ ಮಾರಣಾಂತಿಕ ಹಲ್ಲೆ ಘಟನೆ ನಮ್ಮೆಲ್ಲರಿಗೂ ಅತೀವ ನೋವು ತಂದಿದೆ ಹಾಗೂ ನಮ್ಮನ್ನು ಭಯಭೀತರನ್ನಾಗಿಸಿದೆ. ಮುಂದಿನ 24 ಗಂಟೆಗಳ ಒಳಗೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯ ಸಿಗುವವರೆಗೆ ವಾಮಂಜೂರು ಗ್ರಾಮಾಂತರ ಪೋಲಿಸ್ ಠಾಣೆಯ ಮುಂದೆ ಪ್ರತಿಭಟನೆ ಕೈಗೊಳ್ಳಲಿದ್ದೇವೆ ಎಂದವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕ ಫಾ. ಜೆ.ಬಿ. ಸಲ್ಡಾನ್ಹಾ, ಮಾಜಿ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೋಸ್ತಾ, ನಿಕಟ ಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಪ್ರಶಾಂತ್ ಮೊಂತೇರೊ, ಸಾಮಾಜಿಕ ಹೋರಾಟಗಾರ ಸುನಿಲ್ ಕುಮಾರ್ ಬಜಾಲ್, ಪಾವೂರು ಉಳಿಯ ದ್ವೀಪ ನಿವಾಸಿ ಗಿಲ್ಬರ್ಟ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
Catholic Sabha threatens of protest in front of Police Commissioner office in Mangalore for attack on Alwyn dSouza. Members of Catholic Sabha, Mangaluru, on Monday, October 7, threatened to stage a protest in front of the Police Commissioner’s office if the city police did not arrest all persons behind the assault on the sabha’s president Alwyn Jerome D’Souza on the outskirts of the city on October 5.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm