ಬ್ರೇಕಿಂಗ್ ನ್ಯೂಸ್
08-10-24 05:20 pm Mangalore Correspondent ಕರಾವಳಿ
ಮಂಗಳೂರು, ಅ.8: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ ಪತಿ ಮತ್ತು ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಸೇರಿದಂತೆ ಎರಡು ವಿಶೇಷ ತಂಡ ತನಿಖೆ ಆರಂಭಿಸಿದ್ದಾರೆ. ಪ್ರಕರಣ ಸಂಬಂಧಿಸಿ ಪೊಲೀಸರು ಆಯೆಷಾ ರೆಹ್ಮತ್ ಮತ್ತು ಆಕೆಯ ಪತಿ ಶೋಯಿಬ್ ಹಾಗೂ ಸಿರಾಜ್ ಎಂಬವರನ್ನು ಕಲ್ಲಡ್ಕದಲ್ಲಿ ಬಂಧಿಸಿದ್ದಾಗಿ ತಿಳಿದುಬಂದಿದೆ. ಇದೇ ವೇಳೆ, ಅಬ್ದುಲ್ ಸತ್ತಾರ್ ಮತ್ತು ಶಾಫಿ ನಂದಾವರ ಸೇರಿದಂತೆ ಇತರ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಆಯೆಷಾ ರೆಹ್ಮತ್, ಮುಮ್ತಾಜ್ ಆಲಿಯವರು ನಡೆಸುತ್ತಿದ್ದ ಕಾಲೇಜಿನಲ್ಲಿ ಕೆಲಸಕ್ಕಿದ್ದ ಮಹಿಳೆ. ಈ ವೇಳೆ, ಮುಮ್ತಾಜ್ ಆಲಿಯವರ ಜೊತೆಗೆ ಹತ್ತಿರದ ಒಡನಾಟ ಇರಿಸಿಕೊಂಡಿದ್ದರು ಎನ್ನಲಾಗಿದೆ. ಇದೇ ನೆಪದಲ್ಲಿ ಆರೋಪಿ ಮಹಿಳೆ, ಮುಮ್ತಾಜ್ ಆಲಿಯವರನ್ನು ಬ್ಲಾಕ್ಮೇಲ್ ಮಾಡಲು ಮುಂದಾಗಿದ್ದು ಇದಕ್ಕೆ ಆಕೆಯ ಪತಿ ಶೋಯಿಬ್ ಸಹಕಾರ ನೀಡಿದ್ದ. ಅಲ್ಲದೆ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸತ್ತಾರ್ ಮತ್ತು ಮರಳು ದಂಧೆಕೋರ ಶಾಫಿ ನಂದಾವರ ಸೇರಿಕೊಂಡು ಮುಮ್ತಾಜ್ ಆಲಿಯವರನ್ನು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ತೊಡಗಿದ್ದರು. ಕಳೆದ 3-4 ತಿಂಗಳಿನಿಂದ 50 ಲಕ್ಷಕ್ಕೂ ಹೆಚ್ಚು ದುಡ್ಡನ್ನು ಪೀಕಿಸಿಕೊಂಡಿರುವ ಈ ತಂಡವು, ಎರಡು ಕೋಟಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿತ್ತು.

ಇದಲ್ಲದೆ, ಮುಮ್ತಾಜ್ ಆಲಿ ತನ್ನ ಮಗುವಿನ ಜೊತೆಗೆ ಆಟವಾಡುತ್ತಿದ್ದ ವಿಡಿಯೋವನ್ನು ಮಾಡಿ, ಆರೋಪಿಗಳು ಆಲಿಯವರ ಕುಟುಂಬಸ್ಥರಿಗೆ ಕಳಿಸತೊಡಗಿದ್ದರು. ಈ ವಿಡಿಯೋ ಕಾರಣದಿಂದ ಮುಮ್ತಾಜ್ ಆಲಿ ತನ್ನ ಕುಟುಂಬಸ್ಥರ ನಡುವೆ ನಿಂದನೆಗೆ ಒಳಗಾಗಿದ್ದರು. ಇದೇ ಹಿಂಸೆಯಿಂದಾಗಿ ಮುಮ್ತಾಜ್ ಆಲಿ ಸಾಯಲು ಮುಂದಾಗಿದ್ದು ಮೊನ್ನೆ ನಡುರಾತ್ರಿಯೇ ಮನೆ ಬಿಟ್ಟು ಬಂದಿದ್ದರು. ಇದೇ ಹಿಂಸೆಯಿಂದ ನಸುಕಿನ ಹೊತ್ತಿಗೆ ಕಾರನ್ನು ಕುಳೂರಿನ ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿ ದುರಂತ ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯಕ್ಕೆ ಆರು ಮಂದಿ ಬ್ಲಾಕ್ಮೇಲರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದವರ ಪತ್ತೆಗಾಗಿ ಬಲೆ ಬೀಸಿದ್ದಾರೆ.
Mangalore Mumtaz Ali suicide, three including Blackmailer woman her husband arrested, search for prime accused.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm