ಬ್ರೇಕಿಂಗ್ ನ್ಯೂಸ್
11-12-20 01:18 pm Mangalore Correspondent ಕರಾವಳಿ
ಮಂಗಳೂರು, ಡಿ.11: ಕೆಎಸ್ಸಾರ್ಟಿಸಿ ಬಸ್ ನೌಕರರ ಮುಷ್ಕರದ ಬಿಸಿ ಕರಾವಳಿಗೆ ತಟ್ಟಿಲ್ಲ. ಮಂಗಳೂರು ಮತ್ತು ಉಡುಪಿಯಲ್ಲಿ ಬಸ್ ಸಂಚಾರ ಎಂದಿನಂತಿದ್ದು ಸಾರ್ವಜನಿಕರು ನಿರಾಳವಾಗಿದ್ದಾರೆ.
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಎರಡು ದಿನಗಳಿಂದ ಸಿಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆದಿತ್ತು. ಸರಕಾರ ಮಾತ್ರ, ಸಿಬಂದಿಯ ಬೇಡಿಕೆಯನ್ನು ಪರಿಗಣಿಸಿಲ್ಲ. ಸರಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಮಿಕರ ಯೂನಿಯನ್, ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇವತ್ತಿನ ಮುಷ್ಕರಕ್ಕೆ ಎಐಟಿಯುಸಿ ಬೆಂಬಲಿತರು ಬೆಂಬಲ ನೀಡಿಲ್ಲ. ಹೀಗಾಗಿ ಕರಾವಳಿಯಲ್ಲಿ ಬಹುತೇಕ ಸರಕಾರಿ ಬಸ್ ಗಳ ಸಂಚಾರ ಯಥಾಸ್ಥಿತಿ ಇದ್ದು ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮಂಗಳೂರು, ಪುತ್ತೂರು, ಧರ್ಮಸ್ಥಳ ಡಿಪೋದಿಂದ ಶುಕ್ರವಾರ ಬೆಳಗ್ಗೆಯಿಂದ ರಾಜ್ಯದ ವಿವಿಧ ಕಡೆಗಳಿಗೆ ಬಸ್ ಗಳು ಸಂಚಾರ ನಡೆಸುತ್ತಿವೆ. ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದಂತೆ ಉಡುಪಿ, ಕುಂದಾಪುರ ಕೇಂದ್ರಗಳಲ್ಲೂ ಬಸ್ ಸಂಚಾರ ವ್ಯತ್ಯಯ ಆಗಿಲ್ಲ. ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮುಷ್ಕರಕ್ಕೆ ರೈತ ಸಂಘಟನೆಗಳು ಬೆಂಬಲಿಸಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಹಾಜರಾಗಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಮತ್ತು ಸಿಬಂದಿ ಯೂನಿಯನ್ ಜೊತೆ ಮಾತುಕತೆ ನಡೆಸಿದ್ದಾರೆ. ಈಗಿನ ಸನ್ನಿವೇಶದಲ್ಲಿ ಆ ಬೇಡಿಕೆಯನ್ನು ಈಡೇರಿಸಲು ಆಗದು ಎಂದು ಹೇಳಿದ್ದಾರೆ.
ಗುರುವಾರ ಸಾವಿರಾರು ಸಂಖ್ಯೆಯಲ್ಲಿ ಬಸ್ ನೌಕರರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ್ದರು. ಆದರೆ ಅವರನ್ನು ಅರ್ಧದಲ್ಲೇ ತಡೆದ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಬಸ್ ಸಿಬಂದಿಯ ಮುಷ್ಕರದ ಮಾಹಿತಿ ಇಲ್ಲದೆ ಪ್ರಯಾಣಿಕರು ಕೆಲವು ಕಡೆ ಪರದಾಡುವ ಪರಿಸ್ಥಿತಿ ಹಲವೆಡೆ ಉಂಟಾಗಿದೆ.
Bus strike of KSRTC in Karnataka, Mangalore gets no support. Buses move as usual creating no impact.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am