ಬ್ರೇಕಿಂಗ್ ನ್ಯೂಸ್
09-10-24 02:35 pm Mangalore Correspondent ಕರಾವಳಿ
ಉಳ್ಳಾಲ, ಅ.9: ಉಳ್ಳಾಲ ನಗರಸಭೆಯಿಂದ ತಡೆ ಆದೇಶವಿದ್ದರೂ ವಾಣಿಜ್ಯ ಕಟ್ಟಡವೊಂದರಲ್ಲಿ ರಾತೋರಾತ್ರಿ ಮೊಬೈಲ್ ಟವರ್ ಅಳವಡಿಸಿದ್ದರ ವಿರುದ್ಧ ಸ್ಥಳೀಯರು ರೊಚ್ಚಿಗೆದ್ದು ಪ್ರತಿಭಟಿಸಿದ್ದು ಸ್ಥಳಕ್ಕೆ ಬಂದ ಪೊಲೀಸರು ಟವರ್ ಕಾಮಗಾರಿಯನ್ನ ಸ್ಥಗಿತಗೊಳಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.
ತೊಕ್ಕೊಟ್ಟು ಒಳಪೇಟೆಯ "ಗಟ್ಟಿ ಟವರ್ಸ್" ಬಹು ಮಹಡಿ ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ರಾತ್ರಿ ಏಕಾಏಕಿ ಏರ್ಟೆಲ್ ಕಂಪನಿಯ ಟವರ್ ತಲೆ ಎತ್ತಿ ನಿಂತಿದೆ. ಕಟ್ಟಡದಲ್ಲಿ ಈ ಮೊದಲು ಜಿಯೋ ಕಂಪನಿಯ ಸಣ್ಣ ಟವರ್ ಅಳವಡಿಸಲಾಗಿದ್ದು ಇದಕ್ಕೆ ಸ್ಥಳೀಯರು ಚಕಾರ ಎತ್ತಿರಲಿಲ್ಲ. ಆದರೆ ಕಟ್ಟಡದಲ್ಲಿ ಏರ್ ಟೆಲ್ ಕಂಪನಿಯ ಮತ್ತೊಂದು ದೊಡ್ಡ ಟವರ್ ನಿರ್ಮಾಣವಾಗುವ ವಿಚಾರ ತಿಳಿದ ಸ್ಥಳೀಯರು ಟವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಉಳ್ಳಾಲ ನಗರಸಭೆಗೆ ದೂರು ನೀಡಿದ್ದರು. ಕಳೆದ ಜೂನ್ ತಿಂಗಳಲ್ಲೇ ನಗರಸಭೆಯ ಹಿಂದಿನ ಪೌರಾಯುಕ್ತೆ ವಾಣಿ ಆಳ್ವ ಟವರ್ ನಿರ್ಮಿಸದಂತೆ ತಡೆ ಆದೇಶ ನೀಡಿದ್ದರು. ವಾಣಿ ಆಳ್ವ ವರ್ಗಾವಣೆಗೊಂಡ ನಂತರ ಕಟ್ಟಡ ಮಾಲಕರು ಮತ್ತೆ ಟವರ್ ನಿರ್ಮಾಣಕ್ಕೆ ಮುಂದಾಗಿದ್ದರು.





ಸ್ಥಳೀಯರ ದೂರಿನನ್ವಯ ನಗರಸಭೆಯು ನಿನ್ನೆ (ಅ.8) ಕಟ್ಟಡ ಮಾಲಕ ಸತೀಶ್ ಗಟ್ಟಿ ಅವರಿಗೆ ಟವರ್ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸುವಂತೆ ತಡೆ ಆದೇಶ ನೀಡಿತ್ತು. ತಡೆ ಆದೇಶವನ್ನು ಧಿಕ್ಕರಿಸಿ ನಿನ್ನೆ ರಾತ್ರಿ ಕಟ್ಟಡದಲ್ಲಿ ಟವರ್ ಕಾಮಗಾರಿ ನಡೆಸಲಾಗಿತ್ತು. ಉಳ್ಳಾಲ ನಗರಸಭೆಯಲ್ಲಿ ಝಂಡಾ ಹೂಡಿರುವ ಭ್ರಷ್ಟ ಅಧಿಕಾರಿಯೋರ್ವನ ಸಲಹೆಯಂತೆ ರಾತ್ರಿ ಹೊತ್ತಲ್ಲಿ ಕಾಮಗಾರಿ ನಡೆಸಲಾಗಿದೆ ಎನ್ನಲಾಗಿದೆ. ಇಂದು ಬೆಳಗ್ಗೆಯೂ ಟವರ್ ಕಾಮಗಾರಿ ನಡೆಸುತ್ತಿದ್ದು ಸ್ಥಳೀಯ ನಿವಾಸಿಗಳು ಜಮಾಯಿಸಿ ತಡೆದಿದ್ದಾರೆ.
ಸ್ಥಳಕ್ಕೆ ಬಂದ ಕಟ್ಟಡ ಮಾಲಕ ಸತೀಶ್ ಗಟ್ಟಿ ಮತ್ತು ಅವರ ಪುತ್ರನನ್ನು ಸ್ಥಳೀಯ ನಿವಾಸಿಗಳು ತರಾಟೆಗೆತ್ತಿಕೊಂಡಿದ್ದು ಮಾತಿನ ಚಕಮಕಿ ನಡೆದಿದೆ. ಮಧ್ಯ ಪ್ರವೇಶಿಸಿದ ಉಳ್ಳಾಲ ಪೊಲೀಸರು ಕಾಮಗಾರಿಯನ್ನ ತಡೆದಿದ್ದು ಕಟ್ಟಡ ಮಾಲಕರನ್ನು ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ. ಗಟ್ಟಿ ಟವರ್ಸ್ ಆಸುಪಾಸಿನಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳಿವೆ. ಕಟ್ಟಡ ಮಾಲಕರು ದೂರದಲ್ಲಿ ನೆಲೆಸಿದ್ದಾರೆ. ಕೇವಲ ಹಣ ಗಳಿಸುವ ದುರುದ್ದೇಶದಿಂದ ಕಟ್ಟಡದಲ್ಲಿ ಟವರ್ ನಿರ್ಮಿಸುತ್ತಿರುವುದು ಖಂಡನೀಯ. ಟವರ್ ರೇಡಿಯೇಷನ್ ನಿಂದ ಆಸುಪಾಸಿನ ನಿವಾಸಿಗಳ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ. ಯಾವುದೇ ಕಾರಣಕ್ಕೂ ನಾವು ಟವರ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲವೆಂದು ಸ್ಥಳೀಯ ನಿವಾಸಿ ನರೇಂದ್ರ ತೊಕ್ಕೊಟ್ಟು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರ ದೂರಿನ ಮೇರೆಗೆ ನಗರಸಭೆಯಿಂದ ತಡೆ ನೀಡಿದ್ದರೂ ರಾತ್ರಿ ವೇಳೆ ಟವರ್ ಕಾಮಗಾರಿ ನಡೆಸಲಾಗಿದೆ. ನಾವು ಕಾಮಗಾರಿಯನ್ನು ತಡೆಯುತ್ತೇವೆ. ಟವರ್ ನಿರ್ಮಾಣದ ಬಗ್ಗೆ ತಾಂತ್ರಿಕವಾಗಿ ಪರಿಶೀಲನೆ ನಡೆಸಲಾಗುವುದು. ಬಳಿಕ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಚರ್ಚಿಸಿ ಕಾನೂನಿನ ಪ್ರಕಾರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಉಳ್ಳಾಲ ನಗರಸಭೆಯ ಪೌರಾಯುಕ್ತರಾದ ಮತ್ತಡಿ ತಿಳಿಸಿದ್ದಾರೆ.
Mangalore Illegal mobile tower installed on building at Thokottu amid objection from Ullal town municipal, residents protest and slam building owner for installing mobile tower without any prior permission.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm