ಬ್ರೇಕಿಂಗ್ ನ್ಯೂಸ್
09-10-24 03:18 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ದ್ವೀಪದ ಮರಳುಗಾರಿಕೆ ವಿರುದ್ಧ ಹೋರಾಟದ ದನಿ ಎಬ್ಬಿಸಿದ್ದ ಕೆಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅತಾವುಲ್ಲಾ (40) ಹಾಗೂ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮಾರ್ನಮಿಕಟ್ಟೆ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಸಿರ್ (31) ಬಂಧಿತರು. ನೇತ್ರಾವತಿ ನದಿಯಲ್ಲಿ ಪಾವೂರು ಉಳಿಯ ದ್ವೀಪದ ಸುತ್ತ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಕೆಥೋಲಿಕ್ ಸಭಾ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಪ್ರತಿಭಟನೆ ನಡೆದಿತ್ತು.
ಈ ಬಗ್ಗೆ ಪತ್ರಕರ್ತೆಯೊಬ್ಬರು ವರದಿ ಮಾಡುವುದಕ್ಕಾಗಿ ಅ.5ರಂದು ಅಲ್ವಿನ್ ಡಿಸೋಜ ಜೊತೆಗೆ ಪಾವೂರು ಉಳಿಯ ದ್ವೀಪದ ಸ್ಥಳಕ್ಕೆ ಬಂದಿದ್ದಾಗ, ಅಡ್ಯಾರ್ ಸೇತುವೆ ಬಳಿ ಅಡ್ಡಹಾಕಿದ್ದ ಮರಳು ದಂಧೆ ನಡೆಸುತ್ತಿದ್ದವರ ಪರವಾದ ಗುಂಪು ಆಲ್ವಿನ್ ಡಿಸೋಜ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಗೀಡಾದ ಅಲ್ವಿನ್ ಡಿಸೋಜ ಆಸ್ಪತ್ರೆಗೆ ದಾಖಲಾಗಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
ಆರೋಪಿ ಅತಾವುಲ್ಲಾ, ಅಲ್ವಿನ್ ಡಿಸೋಜರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದ. ಆರೋಪಿ ತೌಸಿರ್ ಬೈದು ಹಲ್ಲೆ ಮಾಡಿದ್ದ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಕೆಥೋಲಿಕ್ ಸಭಾದಿಂದ ಎಚ್ಚರಿಕೆ ನೀಡಲಾಗಿತ್ತು.
Attack on President of Catholic Sabha Alwyn DSouza in Mangalore, two arrested by police. Alwyn was allegedly attacked by sand miners near Harekala bridge on Saturday, October 5. A police communique said Mr. D’Souza was attacked at about 3 p.m. on Saturday when he with one Vijaylaxmi Shibrur and videographers were visiting a place near Harekala bridge.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm