ಬ್ರೇಕಿಂಗ್ ನ್ಯೂಸ್
09-10-24 03:18 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ದ್ವೀಪದ ಮರಳುಗಾರಿಕೆ ವಿರುದ್ಧ ಹೋರಾಟದ ದನಿ ಎಬ್ಬಿಸಿದ್ದ ಕೆಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅತಾವುಲ್ಲಾ (40) ಹಾಗೂ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮಾರ್ನಮಿಕಟ್ಟೆ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಸಿರ್ (31) ಬಂಧಿತರು. ನೇತ್ರಾವತಿ ನದಿಯಲ್ಲಿ ಪಾವೂರು ಉಳಿಯ ದ್ವೀಪದ ಸುತ್ತ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಕೆಥೋಲಿಕ್ ಸಭಾ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಪ್ರತಿಭಟನೆ ನಡೆದಿತ್ತು.


ಈ ಬಗ್ಗೆ ಪತ್ರಕರ್ತೆಯೊಬ್ಬರು ವರದಿ ಮಾಡುವುದಕ್ಕಾಗಿ ಅ.5ರಂದು ಅಲ್ವಿನ್ ಡಿಸೋಜ ಜೊತೆಗೆ ಪಾವೂರು ಉಳಿಯ ದ್ವೀಪದ ಸ್ಥಳಕ್ಕೆ ಬಂದಿದ್ದಾಗ, ಅಡ್ಯಾರ್ ಸೇತುವೆ ಬಳಿ ಅಡ್ಡಹಾಕಿದ್ದ ಮರಳು ದಂಧೆ ನಡೆಸುತ್ತಿದ್ದವರ ಪರವಾದ ಗುಂಪು ಆಲ್ವಿನ್ ಡಿಸೋಜ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಗೀಡಾದ ಅಲ್ವಿನ್ ಡಿಸೋಜ ಆಸ್ಪತ್ರೆಗೆ ದಾಖಲಾಗಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
ಆರೋಪಿ ಅತಾವುಲ್ಲಾ, ಅಲ್ವಿನ್ ಡಿಸೋಜರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದ. ಆರೋಪಿ ತೌಸಿರ್ ಬೈದು ಹಲ್ಲೆ ಮಾಡಿದ್ದ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಕೆಥೋಲಿಕ್ ಸಭಾದಿಂದ ಎಚ್ಚರಿಕೆ ನೀಡಲಾಗಿತ್ತು.
Attack on President of Catholic Sabha Alwyn DSouza in Mangalore, two arrested by police. Alwyn was allegedly attacked by sand miners near Harekala bridge on Saturday, October 5. A police communique said Mr. D’Souza was attacked at about 3 p.m. on Saturday when he with one Vijaylaxmi Shibrur and videographers were visiting a place near Harekala bridge.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm