ಬ್ರೇಕಿಂಗ್ ನ್ಯೂಸ್
09-10-24 07:04 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೇ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ ಎರಡು ಕಿಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ.
ಕೆಥೋಲಿಕ್ ಸಭಾ ವತಿಯಿಂದ ನಿರಂತರ ಪ್ರತಿಭಟನೆ, ಮಾಧ್ಯಮಗಳ ವರದಿ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚತ್ತುಕೊಂಡಿದೆ. ಈ ಹಿಂದೆ 2015ರಲ್ಲಿ ಎ.ಬಿ. ಇಬ್ರಾಹಿಂ ಜಿಲ್ಲಾಧಿಕಾರಿ ಆಗಿದ್ದಾಗ ಪಾವೂರು ಉಳಿಯ ದ್ವೀಪದ ಸುತ್ತ ಮರಳುಗಾರಿಕೆ ನಿಷೇಧ ಮಾಡಿದ್ದರು. ಆದರೆ ಆನಂತರ, ಹೈಕೋರ್ಟ್ ಮೂಲಕ ಮರಳು ದಂಧೆಕೋರರು ಜಿಲ್ಲಾಡಳಿತದ ಆದೇಶವನ್ನು ರದ್ದುಪಡಿಸುವಂತೆ ಮಾಡಿದ್ದರು.
ಈಗ ಹೊರಡಿಸಿರುವ ಆದೇಶದಲ್ಲಿ, ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತ ದಕ್ಕೆಗಳಲ್ಲಿ ಮರಳು ಶೇಖರಿಸುವುದನ್ನು ಮತ್ತು ವಾಹನಗಳಿಗೆ ಮರಳು ಹಂಚುವುದನ್ನು ಕೂಡ ತಕ್ಷಣದಿಂದ ನಿಷೇಧಿಸಲಾಗಿದೆ.
1) ಅಡ್ಯಾರು ಗ್ರಾಮದ ವಲಚ್ಚಿಲ್ ದಕ್ಕೆ, 2) ಅಡ್ಯಾರು ಗ್ರಾಮ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದ ದಕ್ಕೆ, 3) ನದಿಯ ದ್ವೀಪದ ಎಡಭಾಗದಲ್ಲಿರುವ ಪಾವೂರು ದಕ್ಕೆ ಮರಳುಗಾರಿಕೆಗೆ ನಿಷೇಧಿತ ಪ್ರದೇಶವಾಗಿದೆ.
ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಯಾವುದೇ ಪ್ರಕರಣಗಳು ಗಮನಕ್ಕೆ ಬಂದಲ್ಲಿ ಸಂಬಂಧಿಸಿದವರ ವಿರುದ್ಧ ನಿಯಾಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
uliya after protest. Members of Catholic Sabha, Mangaluru, and other pro-people organisations took out a marched protesting unabated illegal extraction of sand from the Netravathi riverbed thereby threatening the existence of Pavoor-Uliya Kudru (river island) on Friday, September 27.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am