ಬ್ರೇಕಿಂಗ್ ನ್ಯೂಸ್
09-10-24 10:52 pm Mangalore Correspondent ಕರಾವಳಿ
ಮಂಗಳೂರು, ಅ.9: ಮಂಗಳೂರು – ಬೆಂಗಳೂರು ಸಂಚರಿಸುವ ಹೆದ್ದಾರಿಯ ಶಿರಾಡಿ ಘಾಟ್, ಕಲ್ಲಡ್ಕ ಹೇಗೂ ದುರವಸ್ಥೆ ಆಗಿಹೋಗಿದೆ. ಯಾವುದೇ ರಸ್ತೆ ಮಾಡುವುದಿದ್ದರೂ, ತಾತ್ಕಾಲಿಕ ವ್ಯವಸ್ಥೆ ಮಾಡಿದ ಮೇಲಷ್ಟೇ ಕಾಮಗಾರಿ ಮಾಡಿ ಎಂದರೆ, ಅಧಿಕಾರಸ್ಥರ ಕಿವಿ ತಲುಪುತ್ತಿಲ್ಲ. ಈಗ ಅಳಿದುಳಿದ ಹೆದ್ದಾರಿಯ ಸ್ಥಿತಿಯೂ ಶೋಚನೀಯ ಎನ್ನುವಂತಾಗಿದೆ. ಮಂಗಳೂರು ನಗರದ ಪಡೀಲ್, ಅಡ್ಯಾರಿನಲ್ಲಿ ಬಿದ್ದಿರುವ ಗುಂಡಿಗಳು ಯಾರದ್ದೋ ಬಲಿಗಾಗಿ ಕಾದಿರುವಂತೆ ಭಾಸವಾಗುತ್ತಿವೆ.
ಪಡೀಲ್ ಹೆದ್ದಾರಿಯ ರೈಲ್ವೇ ಸೇತುವೆ ಎದುರಲ್ಲೇ ದೊಡ್ಡ ದೊಡ್ಡ ಗುಂಡಿಗಳು ಬಾಯ್ದೆರೆದು ನಿಂತಿವೆ. ಹೆದ್ದಾರಿ ನಡುವಲ್ಲಿ ಮತ್ತು ಬದಿಯಲ್ಲಿ ಉದ್ದಕ್ಕೂ ಗುಂಡಿಗಳು ಬಿದ್ದರೂ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿದ್ದೆಯಲ್ಲಿದ್ದಾರೆ. ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗ, ಜೆಸಿಬಿ ಶೋರೂಮ್ ಶಾಪ್ ಎದುರಿನ ಭಾಗದಲ್ಲಿ ಹೊಂಡಗಳು ಉಂಟಾಗಿವೆ. ಮಳೆಯಿಂದಾಗಿ ಇದರಲ್ಲಿ ನೀರು ನಿಲ್ಲುವ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳು ಇದರ ಆಳ ಅರಿವಿಲ್ಲದೆ ಗುಂಡಿಗೆ ಬಿದ್ದರೆ, ಮತ್ತೆ ಏಳಲಾಗದೆ ದೊಡ್ಡ ವಾಹನಗಳ ಅಡಿಗೆ ಸಿಲುಕುವ ಸಾಧ್ಯತೆಯಿದೆ.








ಈ ನಡುವೆ, ಮತ್ತೆ ಮಳೆಯ ಮುನ್ಸೂಚನೆ ಇರುವುದರಿಂದ ಹೆದ್ದಾರಿಯ ಗುಂಡಿಗಳನ್ನು ಹೆದ್ದಾರಿ ಪ್ರಾಧಿಕಾರಗಳು, ಜನಪ್ರತಿನಿಧಿಗಳು ನೋಡಿಯೂ ನೋಡದಂತೆ ಚಲಿಸುವುದು ತರವಲ್ಲ. ಈ ರೀತಿಯ ಗುಂಡಿಗಳೇ ಮರಣ ಗುಂಡಿಗಳಂತಾಗಿದ್ದನ್ನು ಹಲವು ಬಾರಿ ಕಂಡಿದ್ದೇವೆ. ಪಡೀಲಿನ ಉದ್ದಕ್ಕೂ ಹೆದ್ದಾರಿ ಬದಿಯಲ್ಲೂ ನೀರು ನಿಂತು ಆಳ ಗುಂಡಿಗಳೆದ್ದಿದ್ದು ಅವನ್ನು ಸ್ಥಳೀಯರು ಮಣ್ಣು, ಕಲ್ಲು ತುಂಬಿ ಒಮ್ಮೆಗೆ ತುಂಬಿಸಿದರೂ, ಮತ್ತೆ ಅವು ಬಾಯ್ದೆರೆದು ನಿಲ್ಲುತ್ತವೆ. ತುಂಬೆಯಲ್ಲಿ 15 ವರ್ಷಗಳಿಂದ ಈ ಹೆದ್ದಾರಿಯ ಕಾರಣಕ್ಕೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿದ್ದರೂ, ಈ ರಸ್ತೆಯನ್ನು ದುರಸ್ತಿ ಪಡಿಸುವ ಕಾಳಜಿ ಆಳುವವರಿಗಿಲ್ಲ.
ಪಣಂಬೂರು, ಕುಳಾಯಿ ಭಾಗದಲ್ಲಿ ಇದೇ ರೀತಿ ಹೆದ್ದಾರಿ ಗುಂಡಿ ಬಿದ್ದಿದ್ದರೂ, ಕೆಲವನ್ನು ಮುಚ್ಚಲಾಗಿದೆ. ಇನ್ನೂ ಅನೇಕ ಗುಂಡಿಗಳು ಅಲ್ಲಲ್ಲಿ ಎದ್ದು ಕುಳಿತಿದ್ದು, ಪ್ರಯಾಣಿಕರನ್ನು ಹೈರಾಣು ಮಾಡಿವೆ.
Mangalore Deadly potholes at Padil near JCB showroom. Highway authorities show negligence even after huge traffic. Two wheelers and cards face huge problems.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm