ಬ್ರೇಕಿಂಗ್ ನ್ಯೂಸ್
09-10-24 10:52 pm Mangalore Correspondent ಕರಾವಳಿ
ಮಂಗಳೂರು, ಅ.9: ಮಂಗಳೂರು – ಬೆಂಗಳೂರು ಸಂಚರಿಸುವ ಹೆದ್ದಾರಿಯ ಶಿರಾಡಿ ಘಾಟ್, ಕಲ್ಲಡ್ಕ ಹೇಗೂ ದುರವಸ್ಥೆ ಆಗಿಹೋಗಿದೆ. ಯಾವುದೇ ರಸ್ತೆ ಮಾಡುವುದಿದ್ದರೂ, ತಾತ್ಕಾಲಿಕ ವ್ಯವಸ್ಥೆ ಮಾಡಿದ ಮೇಲಷ್ಟೇ ಕಾಮಗಾರಿ ಮಾಡಿ ಎಂದರೆ, ಅಧಿಕಾರಸ್ಥರ ಕಿವಿ ತಲುಪುತ್ತಿಲ್ಲ. ಈಗ ಅಳಿದುಳಿದ ಹೆದ್ದಾರಿಯ ಸ್ಥಿತಿಯೂ ಶೋಚನೀಯ ಎನ್ನುವಂತಾಗಿದೆ. ಮಂಗಳೂರು ನಗರದ ಪಡೀಲ್, ಅಡ್ಯಾರಿನಲ್ಲಿ ಬಿದ್ದಿರುವ ಗುಂಡಿಗಳು ಯಾರದ್ದೋ ಬಲಿಗಾಗಿ ಕಾದಿರುವಂತೆ ಭಾಸವಾಗುತ್ತಿವೆ.
ಪಡೀಲ್ ಹೆದ್ದಾರಿಯ ರೈಲ್ವೇ ಸೇತುವೆ ಎದುರಲ್ಲೇ ದೊಡ್ಡ ದೊಡ್ಡ ಗುಂಡಿಗಳು ಬಾಯ್ದೆರೆದು ನಿಂತಿವೆ. ಹೆದ್ದಾರಿ ನಡುವಲ್ಲಿ ಮತ್ತು ಬದಿಯಲ್ಲಿ ಉದ್ದಕ್ಕೂ ಗುಂಡಿಗಳು ಬಿದ್ದರೂ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿದ್ದೆಯಲ್ಲಿದ್ದಾರೆ. ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗ, ಜೆಸಿಬಿ ಶೋರೂಮ್ ಶಾಪ್ ಎದುರಿನ ಭಾಗದಲ್ಲಿ ಹೊಂಡಗಳು ಉಂಟಾಗಿವೆ. ಮಳೆಯಿಂದಾಗಿ ಇದರಲ್ಲಿ ನೀರು ನಿಲ್ಲುವ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳು ಇದರ ಆಳ ಅರಿವಿಲ್ಲದೆ ಗುಂಡಿಗೆ ಬಿದ್ದರೆ, ಮತ್ತೆ ಏಳಲಾಗದೆ ದೊಡ್ಡ ವಾಹನಗಳ ಅಡಿಗೆ ಸಿಲುಕುವ ಸಾಧ್ಯತೆಯಿದೆ.








ಈ ನಡುವೆ, ಮತ್ತೆ ಮಳೆಯ ಮುನ್ಸೂಚನೆ ಇರುವುದರಿಂದ ಹೆದ್ದಾರಿಯ ಗುಂಡಿಗಳನ್ನು ಹೆದ್ದಾರಿ ಪ್ರಾಧಿಕಾರಗಳು, ಜನಪ್ರತಿನಿಧಿಗಳು ನೋಡಿಯೂ ನೋಡದಂತೆ ಚಲಿಸುವುದು ತರವಲ್ಲ. ಈ ರೀತಿಯ ಗುಂಡಿಗಳೇ ಮರಣ ಗುಂಡಿಗಳಂತಾಗಿದ್ದನ್ನು ಹಲವು ಬಾರಿ ಕಂಡಿದ್ದೇವೆ. ಪಡೀಲಿನ ಉದ್ದಕ್ಕೂ ಹೆದ್ದಾರಿ ಬದಿಯಲ್ಲೂ ನೀರು ನಿಂತು ಆಳ ಗುಂಡಿಗಳೆದ್ದಿದ್ದು ಅವನ್ನು ಸ್ಥಳೀಯರು ಮಣ್ಣು, ಕಲ್ಲು ತುಂಬಿ ಒಮ್ಮೆಗೆ ತುಂಬಿಸಿದರೂ, ಮತ್ತೆ ಅವು ಬಾಯ್ದೆರೆದು ನಿಲ್ಲುತ್ತವೆ. ತುಂಬೆಯಲ್ಲಿ 15 ವರ್ಷಗಳಿಂದ ಈ ಹೆದ್ದಾರಿಯ ಕಾರಣಕ್ಕೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿದ್ದರೂ, ಈ ರಸ್ತೆಯನ್ನು ದುರಸ್ತಿ ಪಡಿಸುವ ಕಾಳಜಿ ಆಳುವವರಿಗಿಲ್ಲ.
ಪಣಂಬೂರು, ಕುಳಾಯಿ ಭಾಗದಲ್ಲಿ ಇದೇ ರೀತಿ ಹೆದ್ದಾರಿ ಗುಂಡಿ ಬಿದ್ದಿದ್ದರೂ, ಕೆಲವನ್ನು ಮುಚ್ಚಲಾಗಿದೆ. ಇನ್ನೂ ಅನೇಕ ಗುಂಡಿಗಳು ಅಲ್ಲಲ್ಲಿ ಎದ್ದು ಕುಳಿತಿದ್ದು, ಪ್ರಯಾಣಿಕರನ್ನು ಹೈರಾಣು ಮಾಡಿವೆ.
Mangalore Deadly potholes at Padil near JCB showroom. Highway authorities show negligence even after huge traffic. Two wheelers and cards face huge problems.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm