ಬ್ರೇಕಿಂಗ್ ನ್ಯೂಸ್
09-10-24 10:52 pm Mangalore Correspondent ಕರಾವಳಿ
ಮಂಗಳೂರು, ಅ.9: ಮಂಗಳೂರು – ಬೆಂಗಳೂರು ಸಂಚರಿಸುವ ಹೆದ್ದಾರಿಯ ಶಿರಾಡಿ ಘಾಟ್, ಕಲ್ಲಡ್ಕ ಹೇಗೂ ದುರವಸ್ಥೆ ಆಗಿಹೋಗಿದೆ. ಯಾವುದೇ ರಸ್ತೆ ಮಾಡುವುದಿದ್ದರೂ, ತಾತ್ಕಾಲಿಕ ವ್ಯವಸ್ಥೆ ಮಾಡಿದ ಮೇಲಷ್ಟೇ ಕಾಮಗಾರಿ ಮಾಡಿ ಎಂದರೆ, ಅಧಿಕಾರಸ್ಥರ ಕಿವಿ ತಲುಪುತ್ತಿಲ್ಲ. ಈಗ ಅಳಿದುಳಿದ ಹೆದ್ದಾರಿಯ ಸ್ಥಿತಿಯೂ ಶೋಚನೀಯ ಎನ್ನುವಂತಾಗಿದೆ. ಮಂಗಳೂರು ನಗರದ ಪಡೀಲ್, ಅಡ್ಯಾರಿನಲ್ಲಿ ಬಿದ್ದಿರುವ ಗುಂಡಿಗಳು ಯಾರದ್ದೋ ಬಲಿಗಾಗಿ ಕಾದಿರುವಂತೆ ಭಾಸವಾಗುತ್ತಿವೆ.
ಪಡೀಲ್ ಹೆದ್ದಾರಿಯ ರೈಲ್ವೇ ಸೇತುವೆ ಎದುರಲ್ಲೇ ದೊಡ್ಡ ದೊಡ್ಡ ಗುಂಡಿಗಳು ಬಾಯ್ದೆರೆದು ನಿಂತಿವೆ. ಹೆದ್ದಾರಿ ನಡುವಲ್ಲಿ ಮತ್ತು ಬದಿಯಲ್ಲಿ ಉದ್ದಕ್ಕೂ ಗುಂಡಿಗಳು ಬಿದ್ದರೂ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿದ್ದೆಯಲ್ಲಿದ್ದಾರೆ. ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗ, ಜೆಸಿಬಿ ಶೋರೂಮ್ ಶಾಪ್ ಎದುರಿನ ಭಾಗದಲ್ಲಿ ಹೊಂಡಗಳು ಉಂಟಾಗಿವೆ. ಮಳೆಯಿಂದಾಗಿ ಇದರಲ್ಲಿ ನೀರು ನಿಲ್ಲುವ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳು ಇದರ ಆಳ ಅರಿವಿಲ್ಲದೆ ಗುಂಡಿಗೆ ಬಿದ್ದರೆ, ಮತ್ತೆ ಏಳಲಾಗದೆ ದೊಡ್ಡ ವಾಹನಗಳ ಅಡಿಗೆ ಸಿಲುಕುವ ಸಾಧ್ಯತೆಯಿದೆ.








ಈ ನಡುವೆ, ಮತ್ತೆ ಮಳೆಯ ಮುನ್ಸೂಚನೆ ಇರುವುದರಿಂದ ಹೆದ್ದಾರಿಯ ಗುಂಡಿಗಳನ್ನು ಹೆದ್ದಾರಿ ಪ್ರಾಧಿಕಾರಗಳು, ಜನಪ್ರತಿನಿಧಿಗಳು ನೋಡಿಯೂ ನೋಡದಂತೆ ಚಲಿಸುವುದು ತರವಲ್ಲ. ಈ ರೀತಿಯ ಗುಂಡಿಗಳೇ ಮರಣ ಗುಂಡಿಗಳಂತಾಗಿದ್ದನ್ನು ಹಲವು ಬಾರಿ ಕಂಡಿದ್ದೇವೆ. ಪಡೀಲಿನ ಉದ್ದಕ್ಕೂ ಹೆದ್ದಾರಿ ಬದಿಯಲ್ಲೂ ನೀರು ನಿಂತು ಆಳ ಗುಂಡಿಗಳೆದ್ದಿದ್ದು ಅವನ್ನು ಸ್ಥಳೀಯರು ಮಣ್ಣು, ಕಲ್ಲು ತುಂಬಿ ಒಮ್ಮೆಗೆ ತುಂಬಿಸಿದರೂ, ಮತ್ತೆ ಅವು ಬಾಯ್ದೆರೆದು ನಿಲ್ಲುತ್ತವೆ. ತುಂಬೆಯಲ್ಲಿ 15 ವರ್ಷಗಳಿಂದ ಈ ಹೆದ್ದಾರಿಯ ಕಾರಣಕ್ಕೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿದ್ದರೂ, ಈ ರಸ್ತೆಯನ್ನು ದುರಸ್ತಿ ಪಡಿಸುವ ಕಾಳಜಿ ಆಳುವವರಿಗಿಲ್ಲ.
ಪಣಂಬೂರು, ಕುಳಾಯಿ ಭಾಗದಲ್ಲಿ ಇದೇ ರೀತಿ ಹೆದ್ದಾರಿ ಗುಂಡಿ ಬಿದ್ದಿದ್ದರೂ, ಕೆಲವನ್ನು ಮುಚ್ಚಲಾಗಿದೆ. ಇನ್ನೂ ಅನೇಕ ಗುಂಡಿಗಳು ಅಲ್ಲಲ್ಲಿ ಎದ್ದು ಕುಳಿತಿದ್ದು, ಪ್ರಯಾಣಿಕರನ್ನು ಹೈರಾಣು ಮಾಡಿವೆ.
Mangalore Deadly potholes at Padil near JCB showroom. Highway authorities show negligence even after huge traffic. Two wheelers and cards face huge problems.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am