ಬ್ರೇಕಿಂಗ್ ನ್ಯೂಸ್
09-10-24 11:28 pm Mangalore Correspondent ಕರಾವಳಿ
ಮಂಗಳೂರು, ಅ.9: ತುಳುನಾಡಿನ ಮಣ್ಣಿನ ಕಲೆಯಾದ ಹುಲಿ ವೇಷ ಕುಣಿತವನ್ನು ಮುಂದಿನ ತಲೆಮಾರಿಗೆ ದಾಟಿಸುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನವು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಆಯೋಜಿಸಿರುವ "ಕುಡ್ಲದ ಪಿಲಿ ಪರ್ಬ" ಉತ್ಸವದ ಮೂರನೇ ಆವೃತ್ತಿಯ ಸ್ಪರ್ಧಾಕೂಟ ಇದೇ ಅ.11ರ ಶುಕ್ರವಾರ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾಡಲಿದ್ದಾರೆ.
ಜಿಲ್ಲೆ, ರಾಜ್ಯ, ದೇಶ, ವಿದೇಶಗಳಲ್ಲಿ ಪ್ರದರ್ಶನ ನೀಡಿರುವ ಕರಾವಳಿಯ ಜನಪ್ರಿಯ 10 ಹುಲಿವೇಷ ತಂಡಗಳು ಸ್ಪರ್ಧಾಕೂಟದಲ್ಲಿ ಪಾಲ್ಗೊಳ್ಳಲಿದ್ದು, ಇಡೀ ದಿನ ಕಡಲನಗರಿ ಹುಲಿಗಳ ಘರ್ಜನೆಗೆ ಸಾಕ್ಷಿಯಾಗಲಿದೆ. ಪಿಲಿಪರ್ಬದಲ್ಲಿ ಭಾಗವಹಿಸುವ ಹುಲಿವೇಷ ತಂಡಗಳು ವೈಭವದ ಮೆರವಣಿಗೆಯ ಮೂಲಕ ವೇದಿಕೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಪ್ರತಿ ತಂಡವೂ ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು, ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿದೆ.

ಅಂತಿಮವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡಗಳಿಗೆ, ಪ್ರಥಮ-ದ್ವಿತೀಯ-ತೃತೀಯ ಬಹುಮಾನ ನೀಡಿ ಗೌರವಿಸಲಾಗುವುದು. ಜೊತೆಗೆ ಶಿಸ್ತಿನ ತಂಡ, ಅತ್ಯುತ್ತಮ ಹುಲಿ ಮೆರವಣಿಗೆ ತಂಡ, ಪರ್ಬದ ಪಿಲಿ, ಕಪ್ಪು ಪಿಲಿ, ಮರಿ ಹುಲಿ, ಮುಡಿ, ತಾಸೆ, ಬಣ್ಣಗಾರಿಕೆ, ಧರಣಿ ಮಂಡಲ ಬಹುಮಾನವನ್ನೂ ನೀಡಲಿದ್ದು ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಇದಕ್ಕಾಗಿ ಹತ್ತು ಮಂದಿ ತೀರ್ಪುಗಾರರು ಇರಲಿದ್ದಾರೆ.
ಈ ಬಾರಿ, ರಾಷ್ಟ್ರಪ್ರಶಸ್ತಿ ವಿಜೇತ ಕರಾವಳಿಯ ಹೆಮ್ಮೆ ರಿಷಬ್ ಶೆಟ್ಟಿ, ಕನ್ನಡ ಚಿತ್ರರಂಗದಲ್ಲಿ ತನ್ನ ಅದ್ಭುತ ಪ್ರತಿಭೆ ಮೂಲಕ ಮಿಂಚುತ್ತಿರುವ ರಾಜ್ ಬಿ. ಶೆಟ್ಟಿ, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಅನೂಪ್ ಸಾಗರ್, ಶನಿಲ್ ಗುರು, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಅರ್ಜುನ್ ಕಾಪಿಕಾಡ್, ಸಮಿತಾ ಅಮೀನ್, ವಿನೀತ್ ಕುಮಾರ್, ಸೇರಿದಂತೆ ಅನೇಕ ಜನಪ್ರಿಯ ವ್ಯಕ್ತಿಗಳು ಪಿಲಿಪರ್ಬಕ್ಕೆ ಆಗಮಿಸಲಿದ್ದಾರೆ. ಸ್ಪರ್ಧಾಕೂಟ ನಡೆಯುವಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಬಹುದಾದ ಸುಸಜ್ಜಿತ ಪ್ರೇಕ್ಷಕ ಗ್ಯಾಲರಿ ನಿರ್ಮಿಸಲಾಗಿದೆ. ಹಿರಿಯರು ಹಾಗೂ ಮಕ್ಕಳಿಗಾಗಿ ಮನೆಯಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಿಸಲು ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ, ಬಿಲ್ಡರ್ ಗಿರಿಧರ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
Talking to reporters here on Wednesday, prathishtana honorary president Giridhar Setty said they restricted entry to 10 teams because of the prevailing code of conduct for byelection to Karnataka Legislative Council’s Dakshina Kannada Local Authorities Constituency. As many as 15 teams participated in the inaugural edition, while 12 teams took in the second edition in 2023.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am