ಬ್ರೇಕಿಂಗ್ ನ್ಯೂಸ್
10-10-24 08:28 pm HK News Desk ಕರಾವಳಿ
ಮಂಗಳೂರು, ಅ.10: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಹೇಮಂತ ಕುಮಾರ್ ಅವರಿಗೆ 2022ನೇ ಸಾಲಿನ ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ಸ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕ ಸರ್ಕಾರವು ಸ್ಥಾಪಿಸಿದ ಈ ಪ್ರಶಸ್ತಿ ಇಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸುತ್ತದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತ ರತ್ನ ಸಿ.ಎನ್.ಆರ್. ರಾವ್ ಗೌರವಾನ್ವಿತ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸೆಪ್ಟೆಂಬರ್ 26ರಂದು ಬೆಂಗಳೂರಿನ ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಎಂಜಿನಿಯರಿಂಗ್ ಮತ್ತು ಭೂ ವಿಜ್ಞಾನದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಂಜಿನಿಯರ್ ಗಳು ಮತ್ತು ವಿಜ್ಞಾನಿಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸ್ಥಾಪಿಸಿದ ಪ್ರಶಸ್ತಿಯು ₹ 1,00,000 ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಪ್ರೊ.ಹೇಮಂತ ಕುಮಾರ್ ಅವರು ತಮ್ಮ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಎನ್ ಐಟಿಕೆ ಸಮುದಾಯದ ಬೆಂಬಲಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ತಮ್ಮ ಸಂಶೋಧನಾ ಪ್ರಯತ್ನಗಳನ್ನು ಪೋಷಿಸುವಲ್ಲಿ ಧನಸಹಾಯ ಸಂಸ್ಥೆಗಳು ಮತ್ತು ಸಹಯೋಗಿಗಳ ಪಾತ್ರಕ್ಕೂ ಅವರು ಧನ್ಯವಾದ ಅರ್ಪಿಸಿದರು. ಎನ್ಐಟಿಕೆ ನಿರ್ದೇಶಕ ಪ್ರೊ.ಬಿ.ರವಿ ಅವರು ಪ್ರೊ.ಹೇಮಂತ ಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಅಭಿನಂದಿಸಿದರು.
Prof. Hemantha Kumar, Department of Mechanical Engineering, National Institute of Technology Karnataka (NITK) has been conferred with Prof. Satish Dhawan Young Engineers State Award in the field of Engineering Sciences for the year 2024. This award, instituted by the Government of Karnataka, recognises outstanding contributions in the field of Engineering Sciences.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am