ಬ್ರೇಕಿಂಗ್ ನ್ಯೂಸ್
11-10-24 09:54 pm Mangalore Correspondent ಕರಾವಳಿ
ಮಂಗಳೂರು, ಅ.11 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯ ನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು ಮತ್ತು ಕೆಪಿಸಿಸಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಉಭಯ ಜಿಲ್ಲೆಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನಿಯೋಜಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ಉಡುಪಿ-ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಯ ಉಸ್ತುವಾರಿಗಳಾಗಿ ಕೆಪಿಸಿಸಿಯ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಯೋಜಿಸಲಾಗಿದೆ.


ದ.ಕ. ಜಿಲ್ಲಾ ಉಸ್ತುವಾರಿಗಳಾಗಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ವಿಧಾನಸಭಾ ಅಭ್ಯರ್ಥಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಜಿ.ಕೃಷ್ಣಪ್ಪ, ಉಸ್ತುವಾರಿ ಪದಾಧಿಕಾರಿಗಳಾಗಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಹೆಗ್ಗಡೆ, ಜಿ.ಎ.ಬಾವ, ನಿವೇದಿತ್ ಆಳ್ವ, ಲಲಿತ್ ರಾಘವ್, ಜುಲ್ಫಿಕರ್ ಅಹಮದ್ ಖಾನ್, ಮಟಿಲ್ಡ ಡಿಸೋಜ, ಪ್ರವೀಣ್ ಪೀಟರ್ ಅವರನ್ನು ನಿಯೋಜಿಸಲಾಗಿದೆ.
ಉಡುಪಿ ಜಿಲ್ಲಾ ಉಸ್ತುವಾರಿಗಳಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಎಂಎಲ್ಸಿ-ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಸುಕುಮಾರ ಶೆಟ್ಟಿ, ವಿಧಾನಸಭಾ ಅಭ್ಯರ್ಥಿಗಳಾದ ಎಂ.ದಿನೇಶ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ಉದಯ ಶೆಟ್ಟಿ, ಉಸ್ತುವಾರಿ ಪದಾಧಿಕಾರಿಗಳಾಗಿ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಗೌಡ, ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಲಾವಣ್ಯ ಬಳ್ಳಾಲ್ ಅವರನ್ನು ನಿಯೋಜಿಸಲಾಗಿದೆ.
ಸಂಚಾಲಕರಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಯೋಜಕರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಬಾಲರಾಜ್ ಅವರು ನೇಮಕಗೊಂಡಿದ್ದಾರೆ.
By elections, incharge election committee ordered to inspect vidhan parishad elections in both DK and Udupi.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am