ಬ್ರೇಕಿಂಗ್ ನ್ಯೂಸ್
12-10-24 07:08 pm Mangalore Correspondent ಕರಾವಳಿ
ಮಂಗಳೂರು, ಅ.12: ಜರ್ಮನಿಯಲ್ಲಿ ಸಾಫ್ಟ್ ವೇರ್ ಕಂಪನಿಯನ್ನು ಹುಟ್ಟುಹಾಕಿ ಪಾಲುದಾರಿಕೆಯಲ್ಲಿ ಮುನ್ನಡೆಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ಅತ್ತಾಜೆ ನಿವಾಸಿ ಆದಿತ್ಯ ಭಟ್ (29) ಹಠಾತ್ ಹೃದಯಾಘಾತಕ್ಕೀಡಾಗಿ ಸಾವು ಕಂಡಿದ್ದಾರೆ. ಮದುವೆಯಾಗಿ ಬಾಳಿ ಬದುಕಬೇಕಿದ್ದ ಆದಿತ್ಯ ಭಟ್ ಎದೆನೋವಿನ ಬಗ್ಗೆ ಸಣ್ಣ ನಿರ್ಲಕ್ಷ್ಯ ಮಾಡಿದ್ದರಿಂದ ಜೀವವನ್ನೇ ಕಳಕೊಂಡಿದ್ದಾರೆ.
ಆದಿತ್ಯ ಭಟ್ ಅವರು ಕಂಪ್ಯೂಟರ್ ಸೈನ್ಸ್ ನಲ್ಲಿ ಬಿಇ ಮುಗಿಸಿ 2020ರಲ್ಲಿ ಜರ್ಮನಿಗೆ ತೆರಳಿ, ಅಲ್ಲಿ ಎಂಎಸ್ಸಿ ಪೂರೈಸಿದ್ದರು. ಆನಂತರ, ಜರ್ಮನಿಯದ್ದೇ ತನ್ನ ಕ್ಲಾಸ್ ಮೇಟ್ ಒಬ್ಬರ ಜೊತೆಗೂಡಿ 2022ರಲ್ಲಿ ಸ್ಟಾರ್ಟಪ್ ಕಂಪನಿಯನ್ನು ಆರಂಭಿಸಿದ್ದರು. 2023ರ ಡಿಸೆಂಬರ್ ತಿಂಗಳಲ್ಲಿ ತಂದೆಗೆ ಹುಷಾರಿಲ್ಲವೆಂದು ಊರಿಗೆ ಬಂದು ಉಜಿರೆ ಸಮೀಪದ ಅತ್ತಾಜೆಯ ಮನೆಯಲ್ಲೇ ನೆಲೆಸಿದ್ದರು. ಜೊತೆಗೆ, ತನ್ನೂರಿಂದಲೇ ಜರ್ಮನಿಗೆ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದರು.
ಇದರ ಜೊತೆಗೆ, ತಂದೆ ರಮೇಶ್ ಭಟ್ 30 ವರ್ಷಗಳಿಂದ ನಡೆಸಿಕೊಂಡು ಬಂದಿದ್ದ ಅತ್ತಾಜೆ ಪಾಲಿಮರ್ಸ್ ಹೆಸರಿನ ರಬ್ಬರ್ ಫ್ಯಾಕ್ಟರಿ ಕೆಲಸ ಮತ್ತು ತೋಟವನ್ನೂ ನೋಡಿಕೊಂಡಿದ್ದರು. ನಿನ್ನೆ ಶುಕ್ರವಾರ, ರಬ್ಬರ್ ಫ್ಯಾಕ್ಟರಿಯಲ್ಲಿ ಆಯುಧ ಪೂಜೆ ಮುಗಿಸಿ ಉಜಿರೆಯಲ್ಲಿ ಶಾರದಾ ಪೂಜೆಯಲ್ಲಿ ಪಾಲ್ಗೊಂಡು ಸಂಜೆ ಹೊತ್ತಿಗೆ ಮನೆಗೆ ಮರಳಿದ್ದರು. ಅದೇ ವೇಳೆಗೆ, ಆದಿತ್ಯ ಭಟ್ ಮನೆಯಲ್ಲಿ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವು ಕಂಡಿದ್ದಾರೆ.
ಆದಿತ್ಯ ಭಟ್ ಅವರಿಗೆ ಮದುವೆ ನಿಶ್ಚಯ ಆಗಿತ್ತು. ಮುಂದಿನ ಡಿಸೆಂಬರ್ ನಲ್ಲಿ ಮದುವೆಯಾಗುವ ಬಗ್ಗೆ ಸಿದ್ಧತೆ ನಡೆದಿತ್ತು. ಈ ನಡುವೆಯೇ ಆದಿತ್ಯ ಭಟ್ ಇಹಲೋಕ ತ್ಯಜಿಸಿದ್ದು, ಕುಟುಂಬಸ್ಥರಿಗೆ ತೀವ್ರ ಶಾಕ್ ಉಂಟು ಮಾಡಿದೆ. ಆದಿತ್ಯ ಅವರಿಗೆ ಎರಡು ದಿನಗಳ ಹಿಂದೆಯೇ ಎದೆನೋವು ಕಾಣಿಸಿಕೊಂಡಿತ್ತು. ಗ್ಯಾಸ್ ಟ್ರಬಲ್ ಎಂದೆನಿಸಿ ಮನೆಯಲ್ಲೇ ಮದ್ದು ಮಾಡಿದ್ದರು. ಆದರೆ, ಅದೇ ನಿರ್ಲಕ್ಷ್ಯ ಯುವಕನ ಜೀವ ಕಿತ್ತುಕೊಂಡಿದೆ.
ಆದಿತ್ಯ ಭಟ್ ಅವರು ಕಳೆದೊಂದು ವರ್ಷದಿಂದ ರಬ್ಬರ್ ಫ್ಯಾಕ್ಟರಿಯನ್ನು ನವೀಕರಣ ಮಾಡುತ್ತಿದ್ದರು. ಆಧುನಿಕ ಮಾದರಿಯ ಯಂತ್ರೋಪಕರಣ ಬಳಸಿ ದೊಡ್ಡದಾಗಿಸಲು ಪ್ಲಾನ್ ಹಾಕಿದ್ದರು. ಇದಕ್ಕಾಗಿ ಸಾಕಷ್ಟು ಕೆಲಸಗಳನ್ನೂ ಮಾಡಿದ್ದರು. ಇನ್ನೊಂದು ವರ್ಷದಲ್ಲಿ ಜರ್ಮನಿಯ ಸಾಫ್ಟ್ ವೇರ್ ಕಂಪನಿಯನ್ನು ಮಂಗಳೂರಿಗೆ ಸ್ಥಳಾಂತರಿಸುವ ಯೋಜನೆಯನ್ನೂ ಹಾಕ್ಕೊಂಡಿದ್ದರು. ಆದರೆ ಬಾಳಿ ಬದುಕಬೇಕಿದ್ದ ಯುವಕ ಹಠಾತ್ತಾಗಿ ಜೀವ ಕಳಕೊಂಡಿದ್ದಾರೆ.
Mangalore 29 year old software engineer dies of heart attack at ujre. The deceased has been identified as Aditya Bhat. His marriage also was fixed in few months time. He had a software company in Germany.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm