ಬ್ರೇಕಿಂಗ್ ನ್ಯೂಸ್
13-10-24 02:52 pm Mangalore Correspondent ಕರಾವಳಿ
ಮಂಗಳೂರು, ಅ.13: ತಲಪಾಡಿಯ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೇಟಿಗೆ ಕೇರಳ ರಾಜ್ಯ ಸರ್ಕಾರದ ಓಣಂ ಬಂಪರ್ ಡ್ರಾ ಯೋಜನೆಯ ಎರಡನೇ ಬಹುಮಾನ ರೂ. ಒಂದು ಕೋಟಿ ಬಹುಮಾನ ಒಲಿದಿದೆ. ಒಂಟಿ ಮಹಿಳೆಗೆ ಲಾಟರಿ ಒಲಿದಿರುವುದರಿಂದ ಹೆಸರು ಮತ್ತು ಊರು ಹೇಳಲು ಅವರು ನಿರಾಕರಿಸಿದ್ದಾರೆ ಎಂದು ಲಾಟರಿ ಅಂಗಡಿ ಮಾಲೀಕ ಕನಕದಾಸ್ ತಿಳಿಸಿದ್ದಾರೆ.
ಕಳೆದ 30 ವರ್ಷಗಳಲ್ಲಿ ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ಮಂದಿ ಲಾಟರಿ ಗೆಲುವು ಸಾಧಿಸಿದ್ದು, ನಾಲ್ಕು ಮಂದಿಗೆ ರೂ.1 ಕೋಟಿ ಒಲಿದಿದ್ದರೆ, ಮತ್ತಿಬ್ಬರಿಗೆ 75 ಲಕ್ಷ ರೂ. ಮತ್ತು 80 ಲಕ್ಷ ರೂ. ಸಿಕ್ಕಿದೆ. ಈ ಬಾರಿಯ ಓಣಂ ಬಂಪರ್ ಲಾಟರಿಯಲ್ಲಿ ಮಹಿಳೆಯೊಬ್ಬರು ಇದೇ ಅಂಗಡಿಯಿಂದ ಟಿಕೆಟ್ ಪಡೆದು ಒಂದು ಕೋಟಿ ಗೆದ್ದಿದ್ದಾರೆ.
ಲಾಟರಿ ವಿಜೇತ ಪ್ರತಿಯೊಬ್ಬರಿಗೂ ಮಂಜೇಶ್ವರ ಸರ್ವಿಸ್ ಕೋಪರೇಟಿವ್ ಬ್ಯಾಂಕ್ ಮೂಲಕ ಹಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಹಿಂದೆ ಬೇರೆ ರಾಜ್ಯದವರಿಗೆ ಲಾಟರಿ ಖರೀದಿಗೆ ಅವಕಾಶ ಇರಲಿಲ್ಲ. ಉಮ್ಮನ್ ಚಾಂಡಿ ಮುಖ್ಯಮಂತ್ರಿಯಾಗಿದ್ದಾಗ, ಲಾಟರಿ ಏಜೆಂಟರ ಸಭೆಗಳಲ್ಲಿ ಧ್ವನಿ ಎತ್ತಿದ ಪರಿಣಾಮವಾಗಿ ಇತರ ರಾಜ್ಯದ ಜನರಿಗೂ ಲಾಟರಿ ಸಿಗುವಂತೆ ಆಗಿದೆ. ಸರಕಾರದ ಕಾನೂನುಗಳನ್ನು ಪಾಲಿಸಿಕೊಂಡು, ಪಾಲಕ್ಕಾಡ್ ಡಿವಿಷನ್ನಿನ ಲಾಟರಿಗಳನ್ನಷ್ಟೇ ಮಾರಾಟ ಮಾಡುತ್ತಿದ್ದೇನೆ ಅನ್ನುತ್ತಾರೆ ಅಂಗಡಿ ಮಾಲೀಕ ಕನಕದಾಸ್.
ಅವರಲ್ಲಿ ಇರುವುದು ಪಾಲಕ್ಕಾಡ್ ವಿಭಾಗದ ಟಿಕೇಟ್ ಮಾತ್ರ. ಹೆಚ್ಚಾಗಿ ಪಾಲ್ಘಾಟ್ ಟಿಕೇಟುಗಳಿಗೆ ಲಾಟರಿ ಒಲಿಯುತ್ತಿರುವುದರಿಂದ ಕನಕದಾಸ್ ಅವರ ಗ್ರಾಹಕರಿಗೂ ಬಹುಮಾನ ಲಭಿಸಿದೆ. ತನಗೂ ಸಣ್ಣ ಮೊತ್ತದ ಬಹುಮಾನ ಬಂದಿದೆ. ಮುಂದೊಂದು ದಿನ ಅವರ ಟಿಕೇಟ್ ಪಡೆದು ಕೋಟಿ ಗಳಿಸುವ ಕನಸು ಇದೆ ಎಂದು ಸ್ಥಳೀಯ ಅಂಗಡಿ ಮಾಲೀಕ ಕುಂಞ್ಞಾಲಿ ಕುಟ್ಟಿ ಹೇಳಿದ್ದಾರೆ.
ಈ ಬಾರಿ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ಮೊದಲ ಬಹುಮಾನ ಮಂಡ್ಯ ಜಿಲ್ಲೆಯ ಪಾಂಡವಪುರ ಮೂಲದ ವ್ಯಕ್ತಿಗೆ ಒಲಿದಿತ್ತು. ಎರಡನೇ ಬಹುಮಾನ 20 ಮಂದಿಗೆ ತಲಾ ಒಂದು ಕೋಟಿ ಇತ್ತು. ತಲಪಾಡಿ ಆಸುಪಾಸಿನ ಬಡ ಮಹಿಳೆಗೆ ಈ ಬಹುಮಾನ ಬಂದಿದ್ದು ವಿಶೇಷ.
The second prize of this year’s Onam bumper lottery of Rs 1 crore has been won by a woman who purchased her ticket from the Stree Shakti lottery agency in Talapady, owned by K R Kanakdas.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm