ಬ್ರೇಕಿಂಗ್ ನ್ಯೂಸ್
13-10-24 02:52 pm Mangalore Correspondent ಕರಾವಳಿ
ಮಂಗಳೂರು, ಅ.13: ತಲಪಾಡಿಯ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೇಟಿಗೆ ಕೇರಳ ರಾಜ್ಯ ಸರ್ಕಾರದ ಓಣಂ ಬಂಪರ್ ಡ್ರಾ ಯೋಜನೆಯ ಎರಡನೇ ಬಹುಮಾನ ರೂ. ಒಂದು ಕೋಟಿ ಬಹುಮಾನ ಒಲಿದಿದೆ. ಒಂಟಿ ಮಹಿಳೆಗೆ ಲಾಟರಿ ಒಲಿದಿರುವುದರಿಂದ ಹೆಸರು ಮತ್ತು ಊರು ಹೇಳಲು ಅವರು ನಿರಾಕರಿಸಿದ್ದಾರೆ ಎಂದು ಲಾಟರಿ ಅಂಗಡಿ ಮಾಲೀಕ ಕನಕದಾಸ್ ತಿಳಿಸಿದ್ದಾರೆ.
ಕಳೆದ 30 ವರ್ಷಗಳಲ್ಲಿ ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ಮಂದಿ ಲಾಟರಿ ಗೆಲುವು ಸಾಧಿಸಿದ್ದು, ನಾಲ್ಕು ಮಂದಿಗೆ ರೂ.1 ಕೋಟಿ ಒಲಿದಿದ್ದರೆ, ಮತ್ತಿಬ್ಬರಿಗೆ 75 ಲಕ್ಷ ರೂ. ಮತ್ತು 80 ಲಕ್ಷ ರೂ. ಸಿಕ್ಕಿದೆ. ಈ ಬಾರಿಯ ಓಣಂ ಬಂಪರ್ ಲಾಟರಿಯಲ್ಲಿ ಮಹಿಳೆಯೊಬ್ಬರು ಇದೇ ಅಂಗಡಿಯಿಂದ ಟಿಕೆಟ್ ಪಡೆದು ಒಂದು ಕೋಟಿ ಗೆದ್ದಿದ್ದಾರೆ.
ಲಾಟರಿ ವಿಜೇತ ಪ್ರತಿಯೊಬ್ಬರಿಗೂ ಮಂಜೇಶ್ವರ ಸರ್ವಿಸ್ ಕೋಪರೇಟಿವ್ ಬ್ಯಾಂಕ್ ಮೂಲಕ ಹಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಹಿಂದೆ ಬೇರೆ ರಾಜ್ಯದವರಿಗೆ ಲಾಟರಿ ಖರೀದಿಗೆ ಅವಕಾಶ ಇರಲಿಲ್ಲ. ಉಮ್ಮನ್ ಚಾಂಡಿ ಮುಖ್ಯಮಂತ್ರಿಯಾಗಿದ್ದಾಗ, ಲಾಟರಿ ಏಜೆಂಟರ ಸಭೆಗಳಲ್ಲಿ ಧ್ವನಿ ಎತ್ತಿದ ಪರಿಣಾಮವಾಗಿ ಇತರ ರಾಜ್ಯದ ಜನರಿಗೂ ಲಾಟರಿ ಸಿಗುವಂತೆ ಆಗಿದೆ. ಸರಕಾರದ ಕಾನೂನುಗಳನ್ನು ಪಾಲಿಸಿಕೊಂಡು, ಪಾಲಕ್ಕಾಡ್ ಡಿವಿಷನ್ನಿನ ಲಾಟರಿಗಳನ್ನಷ್ಟೇ ಮಾರಾಟ ಮಾಡುತ್ತಿದ್ದೇನೆ ಅನ್ನುತ್ತಾರೆ ಅಂಗಡಿ ಮಾಲೀಕ ಕನಕದಾಸ್.
ಅವರಲ್ಲಿ ಇರುವುದು ಪಾಲಕ್ಕಾಡ್ ವಿಭಾಗದ ಟಿಕೇಟ್ ಮಾತ್ರ. ಹೆಚ್ಚಾಗಿ ಪಾಲ್ಘಾಟ್ ಟಿಕೇಟುಗಳಿಗೆ ಲಾಟರಿ ಒಲಿಯುತ್ತಿರುವುದರಿಂದ ಕನಕದಾಸ್ ಅವರ ಗ್ರಾಹಕರಿಗೂ ಬಹುಮಾನ ಲಭಿಸಿದೆ. ತನಗೂ ಸಣ್ಣ ಮೊತ್ತದ ಬಹುಮಾನ ಬಂದಿದೆ. ಮುಂದೊಂದು ದಿನ ಅವರ ಟಿಕೇಟ್ ಪಡೆದು ಕೋಟಿ ಗಳಿಸುವ ಕನಸು ಇದೆ ಎಂದು ಸ್ಥಳೀಯ ಅಂಗಡಿ ಮಾಲೀಕ ಕುಂಞ್ಞಾಲಿ ಕುಟ್ಟಿ ಹೇಳಿದ್ದಾರೆ.
ಈ ಬಾರಿ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ಮೊದಲ ಬಹುಮಾನ ಮಂಡ್ಯ ಜಿಲ್ಲೆಯ ಪಾಂಡವಪುರ ಮೂಲದ ವ್ಯಕ್ತಿಗೆ ಒಲಿದಿತ್ತು. ಎರಡನೇ ಬಹುಮಾನ 20 ಮಂದಿಗೆ ತಲಾ ಒಂದು ಕೋಟಿ ಇತ್ತು. ತಲಪಾಡಿ ಆಸುಪಾಸಿನ ಬಡ ಮಹಿಳೆಗೆ ಈ ಬಹುಮಾನ ಬಂದಿದ್ದು ವಿಶೇಷ.
The second prize of this year’s Onam bumper lottery of Rs 1 crore has been won by a woman who purchased her ticket from the Stree Shakti lottery agency in Talapady, owned by K R Kanakdas.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am