ಬ್ರೇಕಿಂಗ್ ನ್ಯೂಸ್
13-10-24 02:52 pm Mangalore Correspondent ಕರಾವಳಿ
ಮಂಗಳೂರು, ಅ.13: ತಲಪಾಡಿಯ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೇಟಿಗೆ ಕೇರಳ ರಾಜ್ಯ ಸರ್ಕಾರದ ಓಣಂ ಬಂಪರ್ ಡ್ರಾ ಯೋಜನೆಯ ಎರಡನೇ ಬಹುಮಾನ ರೂ. ಒಂದು ಕೋಟಿ ಬಹುಮಾನ ಒಲಿದಿದೆ. ಒಂಟಿ ಮಹಿಳೆಗೆ ಲಾಟರಿ ಒಲಿದಿರುವುದರಿಂದ ಹೆಸರು ಮತ್ತು ಊರು ಹೇಳಲು ಅವರು ನಿರಾಕರಿಸಿದ್ದಾರೆ ಎಂದು ಲಾಟರಿ ಅಂಗಡಿ ಮಾಲೀಕ ಕನಕದಾಸ್ ತಿಳಿಸಿದ್ದಾರೆ.
ಕಳೆದ 30 ವರ್ಷಗಳಲ್ಲಿ ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ಮಂದಿ ಲಾಟರಿ ಗೆಲುವು ಸಾಧಿಸಿದ್ದು, ನಾಲ್ಕು ಮಂದಿಗೆ ರೂ.1 ಕೋಟಿ ಒಲಿದಿದ್ದರೆ, ಮತ್ತಿಬ್ಬರಿಗೆ 75 ಲಕ್ಷ ರೂ. ಮತ್ತು 80 ಲಕ್ಷ ರೂ. ಸಿಕ್ಕಿದೆ. ಈ ಬಾರಿಯ ಓಣಂ ಬಂಪರ್ ಲಾಟರಿಯಲ್ಲಿ ಮಹಿಳೆಯೊಬ್ಬರು ಇದೇ ಅಂಗಡಿಯಿಂದ ಟಿಕೆಟ್ ಪಡೆದು ಒಂದು ಕೋಟಿ ಗೆದ್ದಿದ್ದಾರೆ.
ಲಾಟರಿ ವಿಜೇತ ಪ್ರತಿಯೊಬ್ಬರಿಗೂ ಮಂಜೇಶ್ವರ ಸರ್ವಿಸ್ ಕೋಪರೇಟಿವ್ ಬ್ಯಾಂಕ್ ಮೂಲಕ ಹಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಹಿಂದೆ ಬೇರೆ ರಾಜ್ಯದವರಿಗೆ ಲಾಟರಿ ಖರೀದಿಗೆ ಅವಕಾಶ ಇರಲಿಲ್ಲ. ಉಮ್ಮನ್ ಚಾಂಡಿ ಮುಖ್ಯಮಂತ್ರಿಯಾಗಿದ್ದಾಗ, ಲಾಟರಿ ಏಜೆಂಟರ ಸಭೆಗಳಲ್ಲಿ ಧ್ವನಿ ಎತ್ತಿದ ಪರಿಣಾಮವಾಗಿ ಇತರ ರಾಜ್ಯದ ಜನರಿಗೂ ಲಾಟರಿ ಸಿಗುವಂತೆ ಆಗಿದೆ. ಸರಕಾರದ ಕಾನೂನುಗಳನ್ನು ಪಾಲಿಸಿಕೊಂಡು, ಪಾಲಕ್ಕಾಡ್ ಡಿವಿಷನ್ನಿನ ಲಾಟರಿಗಳನ್ನಷ್ಟೇ ಮಾರಾಟ ಮಾಡುತ್ತಿದ್ದೇನೆ ಅನ್ನುತ್ತಾರೆ ಅಂಗಡಿ ಮಾಲೀಕ ಕನಕದಾಸ್.
ಅವರಲ್ಲಿ ಇರುವುದು ಪಾಲಕ್ಕಾಡ್ ವಿಭಾಗದ ಟಿಕೇಟ್ ಮಾತ್ರ. ಹೆಚ್ಚಾಗಿ ಪಾಲ್ಘಾಟ್ ಟಿಕೇಟುಗಳಿಗೆ ಲಾಟರಿ ಒಲಿಯುತ್ತಿರುವುದರಿಂದ ಕನಕದಾಸ್ ಅವರ ಗ್ರಾಹಕರಿಗೂ ಬಹುಮಾನ ಲಭಿಸಿದೆ. ತನಗೂ ಸಣ್ಣ ಮೊತ್ತದ ಬಹುಮಾನ ಬಂದಿದೆ. ಮುಂದೊಂದು ದಿನ ಅವರ ಟಿಕೇಟ್ ಪಡೆದು ಕೋಟಿ ಗಳಿಸುವ ಕನಸು ಇದೆ ಎಂದು ಸ್ಥಳೀಯ ಅಂಗಡಿ ಮಾಲೀಕ ಕುಂಞ್ಞಾಲಿ ಕುಟ್ಟಿ ಹೇಳಿದ್ದಾರೆ.
ಈ ಬಾರಿ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ಮೊದಲ ಬಹುಮಾನ ಮಂಡ್ಯ ಜಿಲ್ಲೆಯ ಪಾಂಡವಪುರ ಮೂಲದ ವ್ಯಕ್ತಿಗೆ ಒಲಿದಿತ್ತು. ಎರಡನೇ ಬಹುಮಾನ 20 ಮಂದಿಗೆ ತಲಾ ಒಂದು ಕೋಟಿ ಇತ್ತು. ತಲಪಾಡಿ ಆಸುಪಾಸಿನ ಬಡ ಮಹಿಳೆಗೆ ಈ ಬಹುಮಾನ ಬಂದಿದ್ದು ವಿಶೇಷ.
The second prize of this year’s Onam bumper lottery of Rs 1 crore has been won by a woman who purchased her ticket from the Stree Shakti lottery agency in Talapady, owned by K R Kanakdas.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm